ಭಯ ಪಡಬೇಡಿ: ದಾಳಿ ವರದಿಗಳ ನಡುವೆ ವಲಸೆ ಕಾರ್ಮಿಕರಿಗೆ ತಮಿಳುನಾಡು ರಾಜ್ಯಪಾಲರ ಭರವಸೆ
Team Udayavani, Mar 5, 2023, 2:15 PM IST
ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ಮಾರಣಾಂತಿಕ ದಾಳಿಯ ಬಗ್ಗೆ ತಪ್ಪು ವರದಿಗಳ ಮಧ್ಯೆ, ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯದ ವಲಸೆ ಕಾರ್ಮಿಕರಿಗೆ ಭಯಪಡಬೇಡಿ, ಸ್ಥಳೀಯ ಜನರು ಒಳ್ಳೆಯವರು ಮತ್ತು ಸ್ನೇಹಪರರು ಎಂದು ಹೇಳಿದ್ದಾರೆ.
ಕಾರ್ಮಿಕರು ಭಯಪಡುವ ಅಗತ್ಯವಿಲ್ಲ ಎಂದು ರಾಜಭವನವು ತಮಿಳು, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಪೋಸ್ಟ್ ಮಾಡಿದ ಟ್ವೀಟ್ಗಳಲ್ಲಿ ತಿಳಿಸಿದೆ.
ತಮಿಳುನಾಡಿನಲ್ಲಿರುವ ಉತ್ತರ ಭಾರತೀಯ ಕಾರ್ಮಿಕರು ಭಯಭೀತರಾಗಬೇಡಿ. ಯಾವುದೇ ಅಭದ್ರತೆಯನ್ನು ಅನುಭವಿಸಬೇಡಿ. ತಮಿಳುನಾಡಿನ ಜನರು ತುಂಬಾ ಒಳ್ಳೆಯವರು ಮತ್ತು ಸ್ನೇಹಪರರಾಗಿದ್ದಾರೆ. ನಿಮಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ರಾಜಭವನ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ತಿಳಿಸಿದೆ.
ರಾಜ್ಯದ ಎಲ್ಲಾ ವಲಸೆ ಕಾರ್ಮಿಕರು ಸುರಕ್ಷಿತವಾಗಿದ್ದಾರೆ. ವದಂತಿಗಳನ್ನು ಹರಡಿದ್ದಕ್ಕಾಗಿ ಹಿಂದಿ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಹೇಳಿದ್ದರು.
Governor urged the North Indian labourers in Tamil Nadu not to panic and feel insecure, as the people of Tamil Nadu are very nice and friendly, and the state government is committed to provide them security.@PMOIndia @HMOIndia @PIB_India @pibchennai @ANI @PTI_News
— RAJ BHAVAN, TAMIL NADU (@rajbhavan_tn) March 5, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ