ಇಂದಿನಿಂದ ಸಂಸತ್ತಿನ ಮುಂಗಾರು ಕಲಾಪ: ಕೋವಿಡ್ 19 ನಡುವೆ ಸುಗಮ ಅಧಿವೇಶನಕ್ಕೆ ಸಿದ್ಧತೆ


Team Udayavani, Sep 14, 2020, 7:17 AM IST

ಇಂದಿನಿಂದ ಸಂಸತ್ತಿನ ಮುಂಗಾರು ಕಲಾಪ: ಕೋವಿಡ್ 19 ನಡುವೆ ಸುಗಮ ಅಧಿವೇಶನಕ್ಕೆ ಸಿದ್ಧತೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ 19 ಆತಂಕದ ನಡುವೆ ಸೋಮವಾರದಿಂದ ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭಗೊಳ್ಳಲಿದೆ.

ಈಗಾಗಲೇ ರೂಪಿಸಿರುವ ನಿಯಮಗಳಂತೆ ಅಧಿವೇಶನದಲ್ಲಿ ಭಾಗಿಯಾಗಲಿರುವ ಸಂಸದರು ರವಿವಾರ ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು, ಒಟ್ಟು ಐವರಲ್ಲಿ ಪಾಸಿಟಿವ್‌ ಕಾಣಿಸಿಕೊಂಡಿದೆ. ಸದ್ಯ ಇದು ಆತಂಕಕ್ಕೆ ಕಾರಣವಾಗಿದೆ.

18 ದಿನ ಅಧಿವೇಶನ
ಸೆ. 14ರಿಂದ ಅ. 1ರವರೆಗೆ ಅಧಿವೇಶನ ನಡೆಯಲಿದೆ. ಶನಿವಾರ ಮತ್ತು ರವಿವಾರ ರಜೆ ಇರುವುದಿಲ್ಲ. ರೈತರ ಉತ್ಪನ್ನ, ಮಾರಾಟ ಮತ್ತು ವಾಣಿಜ್ಯ ಮಸೂದೆ 2020 ಮತ್ತು ಎಂಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಸೂದೆ ಮಾತ್ರವಲ್ಲದೆ 11 ಅಧ್ಯಾದೇಶಗಳು ಮಸೂದೆ ರೂಪದಲ್ಲಿ ಮಂಡನೆಯಾಗಲಿವೆ.

ಪ್ರತ್ಯೇಕ ಸಮಯದಲ್ಲಿ ಕಲಾಪ
ಮೊದಲ ದಿನವಾದ ಸೋಮವಾರ ಮಾತ್ರ ಲೋಕಸಭೆ, ರಾಜ್ಯಸಭೆಗಳಲ್ಲಿ ಬೆಳಗ್ಗೆಯೇ ಕಲಾಪ ನಡೆಸಲಾಗುತ್ತದೆ. ಅಗಲಿದ ಗಣ್ಯರಿಗೆ ನಮನ ಸಲ್ಲಿಸಿ ಮಂಗಳವಾರಕ್ಕೆ ಕಲಾಪ ಮುಂದೂಡುವ ಸಂಭವವಿದೆ. ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಲಾಗಿಲ್ಲ.

ಆಸನ ವ್ಯವಸ್ಥೆ ಬದಲು
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಆಸನ ವ್ಯವಸ್ಥೆಯನ್ನೇ ಬದಲು ಮಾಡಲಾಗಿದೆ. ಕೆಲವರಿಗೆ ತಮ್ಮ ತಮ್ಮ ಕಚೇರಿಗಳಲ್ಲಿ ಮತ್ತು ಮೊಗಸಾಲೆಯಲ್ಲಿ ಕುಳಿತು ಸದನದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ.

ಹಿರಿಯರ ಗೈರು?
ಮೂಲಗಳ ಪ್ರಕಾರ, 65 ವರ್ಷ ಮೀರಿದ ಬಹಳಷ್ಟು ಸಂಸದರು ಕಲಾಪದಿಂದ ದೂರ ಉಳಿಯುವ ಸಾಧ್ಯತೆ ಇದೆ. ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು 785 ಸಂಸದರಿದ್ದಾರೆ. ಇವರಲ್ಲಿ 200 ಮಂದಿ 65 ವರ್ಷ ಮೇಲ್ಪಟ್ಟವರು. ರಾಜ್ಯಸಭೆಯ ಒಟ್ಟು 247 ಸದಸ್ಯರಲ್ಲಿ 97 ಮಂದಿ 65 ವರ್ಷ ಮೀರಿದ ಹಿರಿಯರು, 20 ಮಂದಿ 80 ವರ್ಷ ಮೀರಿದವರು ಇದ್ದಾರೆ. ಲೋಕಸಭೆಯಲ್ಲಿ 65 ವರ್ಷ ಮೀರಿದ 130 ಸಂಸದರಿದ್ದರೆ, 75 ವರ್ಷ ಮೇಲ್ಪಟ್ಟ 30 ಸಂಸದರಿದ್ದಾರೆ. 90 ವರ್ಷದ ಓರ್ವ ಸಂಸದರಿದ್ದಾರೆ.

ಸರ್ವ ಪಕ್ಷ ಸಭೆ ಇಲ್ಲ
ಇದೇ ಮೊದಲ ಬಾರಿಗೆ ಸರ್ವಪಕ್ಷಗಳ ಸಭೆ ನಡೆಸದೇ ಅಧಿವೇಶನ ಆರಂಭಿಸಲಾಗುತ್ತದೆ. ಆದರೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ರವಿವಾರ ಕಲಾಪ ಸಲಹಾ ಸಮಿತಿಯ ಸಭೆ ನಡೆಸಿ, ವಿಪಕ್ಷ ಸದಸ್ಯರ ಬೆಂಬಲ ಕೋರಿದ್ದಾರೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.