2024ರಲ್ಲಿ ಲಾಲು-ನಿತೀಶ್ ಜೋಡಿ ನಿರ್ನಾಮ: ಬಿಹಾರದಲ್ಲಿ ಗುಡುಗಿದ ಅಮಿತ್ ಶಾ
ಕಾಂಗ್ರೆಸ್ ಮಡಿಲಲ್ಲಿ ಕೂರುತ್ತಾರೆ... ಲಾಲುಗೆ ಎಚ್ಚರಿಕೆ
Team Udayavani, Sep 23, 2022, 4:17 PM IST
ಪಾಟ್ನಾ: ”ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿಯಾಗಲು ಬಯಸಿ ಆರ್ಜೆಡಿ ಮತ್ತು ಕಾಂಗ್ರೆಸ್ ಜತೆ ಕೈ ಜೋಡಿಸಲು ಬಿಜೆಪಿ ಬೆನ್ನಿಗೆ ಚೂರಿ ಇರಿದಿದ್ದಾರೆ” ಎಂದು ಕೇಂದ್ರ ಗ್ರಹ ಸಚಿವ ಅಮಿತ್ ಶಾ ಶುಕ್ರವಾರ ಕಿಡಿ ಕಾರಿದ್ದಾರೆ.
ಬಿಹಾರದ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶಕ್ಕೆ ಎರಡು ದಿನಗಳ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೂರ್ಣೆಯಾದಲ್ಲಿ ‘ಜನ ಭವನ ಮಹಾಸಭಾ’ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ: ನಗರ ನಕ್ಸಲರು ಈಗಲೂ ಸಕ್ರಿಯವಾಗಿದ್ದಾರೆ…ಎಚ್ಚರ ವಹಿಸಿ: ಪರಿಸರ ಖಾತೆ ಸಚಿವರಿಗೆ ಪ್ರಧಾನಿ ಮೋದಿ
ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಸಖ್ಯ ಕಡಿದುಕೊಂಡು, ಆರ್ ಜೆಡಿ ಮತ್ತು ಇತರ ವಿಪಕ್ಷ ಗಳ ಬೆಂಬಲದೊಂದಿಗೆ ಮತ್ತೆ ಸಿಎಂ ಆದ ಬಳಿಕ ಇದೆ ಮೊದಲ ಬಾರಿಗೆ ಶಾ ಅವರು ಬಿಹಾರಕ್ಕೆ ಭೇಟಿ ನೀಡಿದ್ದಾರೆ.
2025ರ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಬಿಹಾರದಲ್ಲಿ ಸರಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಶಾ, ”ನಿತೀಶ್ ಗೆ ಯಾವುದೇ ಸಿದ್ಧಾಂತವಿಲ್ಲ, ಆದ್ದರಿಂದ ಅವರು ತಮ್ಮ ಸಮಾಜವಾದಿ ಆದರ್ಶಗಳನ್ನು ತೊರೆದು ಜಾತಿ ಆಧಾರಿತ ರಾಜಕಾರಣದ ಪರವಾಗಿ ವಾಲಿದ್ದಾರೆ” ಎಂದು ಆರೋಪಿಸಿದರು.
“2014 ರಲ್ಲಿ,ಬಿಹಾರ ಸಿಎಂ ನಿತೀಶ್ ಕುಮಾರ್ ಕೇವಲ 2 ಲೋಕಸಭಾ ಸ್ಥಾನಗಳನ್ನು ಹೊಂದಿದ್ದೀರಿ, 2024 ರ ಲೋಕಸಭಾ ಚುನಾವಣೆ ಬರಲಿ, ಬಿಹಾರದ ಸಾರ್ವಜನಿಕರು ಲಾಲು-ನಿತೀಶ್ ಜೋಡಿಯನ್ನು ನಿರ್ನಾಮ ಮಾಡುತ್ತಾರೆ. 2025ರ ಚುನಾವಣೆಯಲ್ಲಿ ನಾವು ಪೂರ್ಣ ಬಹುಮತದೊಂದಿಗೆ ಇಲ್ಲಿ ಅಧಿಕಾರಕ್ಕೆ ಬರಲಿದ್ದೇವೆ” ಎಂದರು.
“ನಾವು ಸ್ವಾರ್ಥ ಮತ್ತು ಅಧಿಕಾರದ ಬದಲಿಗೆ ಸೇವೆ ಮತ್ತು ಅಭಿವೃದ್ಧಿಯ ರಾಜಕೀಯವನ್ನು ನಂಬುತ್ತೇವೆ. ಪ್ರಧಾನಿಯಾಗಲು ಬಯಸಿ, ನಿತೀಶ್ ಕುಮಾರ್ ಬೆನ್ನಿಗೆ ಚೂರಿ ಹಾಕಿದರು. ಈಗ ಆರ್ಜೆಡಿ ಮತ್ತು ಕಾಂಗ್ರೆಸ್ನ ಮಡಿಲಲ್ಲಿ ಕುಳಿತಿದ್ದಾರೆ. ನನ್ನ ಕುರ್ಚಿ ಹಾಗೇ ಉಳಿಯಬೇಕು ಎಂಬುದು ನಿತೀಶ್ ಅವರ ಏಕೈಕ ಸಿದ್ಧಾಂತ” ಎಂದರು.
ಬದಲಾಗುತ್ತಿರುವ ರಾಜಕೀಯ ಮೈತ್ರಿಗಳಿಗಾಗಿ ನಿತೀಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾ, ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಎಚ್ಚರಿಕೆ ನೀಡಿ “ರಾಜಕೀಯ ಮೈತ್ರಿಗಳನ್ನು ಬದಲಾಯಿಸುವ ಮೂಲಕ ನಿತೀಶ್ ಪ್ರಧಾನಿಯಾಗಬಹುದೇ? ರಾಜಕೀಯಕ್ಕೆ ಬಂದಾಗಿನಿಂದಲೂ ಹಲವರಿಗೆ ದ್ರೋಹ ಬಗೆದಿದ್ದಾರೆ. ನಿತೀಶ್ ನಾಳೆ ನಿಮ್ಮನ್ನು ಬಿಟ್ಟು ಕಾಂಗ್ರೆಸ್ನ ಮಡಿಲಲ್ಲಿ ಕುಳಿತುಕೊಳ್ಳಬಹುದು” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ