“ಅಜೇಯ ಬಿಜೆಪಿ’ಯಡಿ ಸ್ಪರ್ಧೆ
Team Udayavani, Sep 9, 2018, 6:00 AM IST
ಹೊಸದಿಲ್ಲಿ: “ಅಜೇಯ ಬಿಜೆಪಿ…’ -ಇದು 2019ರ ಲೋಕಸಭೆ ಚುನಾವಣೆಗಾಗಿ ಬಿಜೆಪಿಯ ಹೊಸ ಘೋಷವಾಕ್ಯ. ಇಲ್ಲಿನ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಶನಿವಾರ ಆರಂಭವಾಗಿದ್ದು, “ಅಜೇಯ ಬಿಜೆಪಿ’ ಘೋಷವಾಕ್ಯದೊಂದಿಗೆ ಚುನಾವಣೆ ಎದುರಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲೇ ಚುನಾವಣೆ ಎದುರಿಸಲೂ ಮೊದಲ ದಿನದ ಕಾರ್ಯಕಾರಿಣಿಯಲ್ಲೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ವರ್ಷಾಂತ್ಯಕ್ಕೆ ನಾಲ್ಕು ರಾಜ್ಯಗಳ ವಿಧಾನಸಭೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಇದರ ಸಿದ್ಧತೆಗಾಗಿ ಈ ಸಭೆ ಕರೆಯಲಾಗಿದೆ. ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರು, ಕೇಂದ್ರದ ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ. ರವಿವಾರ ಪ್ರಧಾನಿ ಮೋದಿ ಅವರು ಮಾತನಾಡಲಿದ್ದಾರೆ.
ಶನಿವಾರದ ಸಭೆಯಲ್ಲಿ ಮುಂದಿನ ವರ್ಷಾರಂಭದಲ್ಲಿ ನಡೆಸಲು ಉದ್ದೇಶಿಸಿದ್ದ ಆಂತರಿಕ ಚುನಾವಣೆಯನ್ನು ಮುಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೂಲಕ 2019ರ ಲೋಕಸಭೆ ಚುನಾ ವಣೆಯನ್ನೂ ಶಾ ನೇತೃತ್ವದಲ್ಲೇ ಎದುರಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಜತೆಗೆ ಈ ವರ್ಷಾಂತ್ಯದಲ್ಲಿ ನಡೆಯುವ ನಾಲ್ಕು ರಾಜ್ಯಗಳ ಚುನಾವಣೆಗೆ ತಂತ್ರಗಾರಿಕೆ ಮತ್ತು ತೆಲಂಗಾಣ ಚುನಾವಣೆ ಮೇಲೂ ಹೆಚ್ಚಿನ ಗಮನಹರಿಸಲು ನಿರ್ಧರಿಸಲಾಗಿದೆ.
ಘಟಬಂಧನ್ ಕಣ್ಣೊರೆಸುವ ತಂತ್ರ
ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ವಿಪಕ್ಷಗಳ ಮಹಾ ಘಟಬಂಧನ್ ಕೇವಲ ಕಣ್ಣೊರೆಸುವ ತಂತ್ರ ಮತ್ತು ಭ್ರಮಾಕೂಟ. ನಾವು 2014ರಲ್ಲಿ ಗೆದ್ದಿದ್ದ ಸ್ಥಾನಗಳಿಗಿಂತಲೂ ಈ ಬಾರಿ ಹೆಚ್ಚು ಗೆಲ್ಲುತ್ತೇವೆ ಎಂದಿದ್ದಾರೆ. ಈ ಮಧ್ಯೆ ಬಿಜೆಪಿ ಮೇಕ್ ಇನ್ ಇಂಡಿಯಾ ಬಗ್ಗೆ ಯೋಚನೆ ಮಾಡುತ್ತಿದ್ದರೆ, ಕಾಂಗ್ರೆಸ್ ಬ್ರೇಕಿಂಗ್ ಇಂಡಿಯಾಗೆ ಪ್ರಯತ್ನಿಸು ತ್ತಿದೆ ಎಂದೂ ಪ್ರಮುಖ ವಿಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.
ಅಮಿತ್ ಶಾ ನೇತೃತ್ವದಲ್ಲಿ 2019ರ ಚುನಾವಣೆ ಎದುರಿಸಲು ನಿರ್ಧಾರ
ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾಷಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ