ಪಶ್ಚಿಮಬಂಗಾಳದಲ್ಲಿ ಬಿಜೆಪಿ ಬೃಹತ್ ಸಮಾವೇಶ, ಶಾ ಸಮ್ಮುಖದಲ್ಲಿ ಸುವೇಂದು ಬಿಜೆಪಿಗೆ
ಟಿಎಂಸಿ ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ಇತ್ತೀಚೆಗಷ್ಟೇ ಪಕ್ಷವನ್ನು ತ್ಯಜಿಸಿದ್ದರು.
Team Udayavani, Dec 19, 2020, 3:36 PM IST
ಕೋಲ್ಕತಾ; ಪಶ್ಚಿಮಬಂಗಾಳದ ಮಿಡ್ನಾಪುರ್ ನಲ್ಲಿ ನಡೆದ ಭಾರತೀಯ ಜನತಾ ಜನತಾ ಪಕ್ಷದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಟಿಎಂಸಿ ಮಾಜಿ ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ಬಿಜೆಪಿಗೆ ಶನಿವಾರ(ಡಿಸೆಂಬರ್ 19, 2020) ಸೇರ್ಪಡೆಗೊಂಡರು.
ಮುಂಬರುವ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಲಿರುವ ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡು ದಿನಗಳ ಭೇಟಿಗಾಗಿ ಶನಿವಾರ ಪಶ್ಚಿಮಬಂಗಾಳಕ್ಕೆ ಆಗಮಿಸಿದ್ದು, ಮಿಡ್ನಾಪುರದಲ್ಲಿನ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದರು.
ಟಿಎಂಸಿ ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ಇತ್ತೀಚೆಗಷ್ಟೇ ಪಕ್ಷವನ್ನು ತ್ಯಜಿಸಿದ್ದರು. ಏತನ್ಮಧ್ಯೆ ಪಶ್ಚಿಮಬಂಗಾಳ ಸ್ಪೀಕರ್ ಸುವೇಂದು ರಾಜೀನಾಮೆ ಪತ್ರ ಸಮರ್ಪಕವಾಗಿಲ್ಲದ ಕಾರಣ ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದರು. ಅಲ್ಲದೇ ಡಿಸೆಂಬರ್ 21ರಂದು ಮಧ್ಯಾಹ್ನ ಸ್ಪೀಕರ್ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದರು.
ಇದನ್ನೂ ಓದಿ:ಉತ್ತರಪ್ರದೇಶ: ಮತಾಂತರ ನಿಷೇಧ ಕಾಯ್ದೆಯಲ್ಲಿ ಬಂಧಿಸಲ್ಪಟ್ಟ ಇಬ್ಬರು ಬಂಧಮುಕ್ತ
ಸ್ಪೀಕರ್ ಆದೇಶದ ನಡುವೆಯೇ ಸುವೇಂದು ಅಧಿಕಾರಿ ಇಂದು ಅಧಿಕೃತವಾಗಿ ಅಮತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿದ್ದ ಅಮಿತ್ ಮೊದಲು ಮಿಡ್ನಾಪುರದ ರಾಮಕೃಷ್ಣ ಮಿಷನ್ ಗೆ ಭೇಟಿ ನೀಡಿದ್ದರು. ಸಿದ್ದೇಶ್ವರಿ ಕಾಳಿ ದೇಗುಲಕ್ಕೆ ಭೇಟಿ ನೀಡಿದ್ದ ಶಾ ಅವರು ಬಂಗಾಳದ ಮಿಡ್ನಾಪುರ್ ಜಿಲ್ಲೆಯ ಬೇಲಿಜುರಿ ಗ್ರಾಮದ ರೈತರ ಮನೆಯೊಂದರಲ್ಲಿ ಭೋಜನ ಸ್ವೀಕರಿಸಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗೀಯ, ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ
ಜಮ್ಮು ಕಾಶ್ಮೀರದ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ: ಮೂವರು ಯೋಧರು ಹುತಾತ್ಮ
ಪೋಸ್ಟ್ ಇಂಡಿಯಾ ಧ್ವಜಕ್ಕೆ ಜಿಎಸ್ಟಿ, ವಿತರಣಾ ಶುಲ್ಕವಿಲ್ಲ
ದೇಶ ತೊರೆಯುವರ ವಿವರ 24 ಗಂಟೆ ಮುಂಚೆ ಕಸ್ಟಮ್ಸ್ ಇಲಾಖೆಗೆ
ರಾಬಿನ್ ಹುಡ್ ಆರ್ಮಿಯಿಂದ 75 ಲಕ್ಷ ಊಟ! ಸ್ವಾತಂತ್ರ್ಯದ ಅಮೃತ ಮಹೋತ್ಸವದ ವಿಶಿಷ್ಟ ಆಚರಣೆ
MUST WATCH
3 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
ಹೊಸ ಸೇರ್ಪಡೆ
ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ
ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ದೇಶದ ಪರ ಆಡಿ ಎಂದು ಬೇಡಲು ಆಗುತ್ತದೆಯೇ..?: ಅಳಲು ತೋಡಿಕೊಂಡ ವಿಂಡೀಸ್ ಕೋಚ್
ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ