ಪದ್ಮಾವತ್‌ ವಿವಾದ ಘಟಿಸಲೇ ಬಾರದಿತ್ತು ಏಕೆ? ಅಮಿತಾಭ್‌ ಹೀಗಂತಾರೆ


Team Udayavani, Jan 19, 2018, 4:08 PM IST

Amitabh-Padmavat-700.jpg

ಹೊಸದಿಲ್ಲಿ : ಸಂಜಯ್‌ ಲೀಲಾ ಭನ್ಸಾಲಿ ನಿರ್ದೇಶನದ ಐತಿಹಾಸಿಕ ಕಥಾ ಚಿತ್ರ ಪದ್ಮಾವತ್‌ ವಿವಾದ ಉಂಟಾಗಲೇ ಬಾರದಿತ್ತು ಏಕೆ ಎಂಬುದನ್ನು ಬಾಲಿವುಡ್‌ ಮೆಗಾಸ್ಟಾರ್‌ ಅಮಿತಾಭ್‌ ಬಚ್ಚನ್‌ ಅತ್ಯಂತ ಪರಿಣಾಮಕಾರಿಯಾಗಿ ತಮ್ಮ ಟ್ವಿಟರ್‌ನಲ್ಲಿ ಬರೆದಿದ್ದಾರೆ. ಅವರ ಈ ಬರಹ “ಪದ್ಮಾವತ್‌’ ವಿವಾದ ಸೃಷ್ಟಿಸಿರುವ ಎಲ್ಲರ ಕಣ್ತೆರೆಸುವಂತಿದೆ.

ಅಮಿತಾಭ್‌ ಬರೆಯುತ್ತಾರೆ : ಕತ್ತಲೆಯ ಚಿತ್ರ ಮಂದಿರದಲ್ಲಿ ನಾವು ಸಿನೆಮಾ ನೋಡುವಾಗ ನಮ್ಮ ಅಕ್ಕ ಪಕ್ಕ ಕುಳಿತವರ ಜಾತಿ, ಮತ, ಧರ್ಮ, ವರ್ಣ ಇತ್ಯಾದಿ ಯಾವುದನ್ನೂ ಕೇಳುವುದಿಲ್ಲ; ನಾವೆಲ್ಲರೂ ಚಿತ್ರವನ್ನು ಆನಂದಿಸುತ್ತೇವೆ, ನಗುತ್ತೇವೆ, ಅಳುತ್ತೇವೆ, ಹಾಡುಗಳನ್ನು ಗುನುಗುತ್ತೇವೆ; ಈ ವಿಘಟಿತ ಜಗತ್ತಿನಲ್ಲಿ ಸಿನೆಮಾ ಎಲ್ಲರನ್ನೂ ಒಗ್ಗೂಡಿಸುತ್ತದೆ !

ಅಮಿತಾಭ್‌ ಅವರು ತಮ್ಮ ಟ್ಟಿಟರ್‌ ಬರಹದಲ್ಲಿ ಪದ್ಮಾವತ್‌ ಚಿತ್ರದ ಹೆಸರನ್ನು ಎತ್ತಿಲ್ಲ; ಆದರೆ ಅದನ್ನು ಸುತ್ತಿಕೊಂಡಿರುವ ವಿವಾದವನ್ನೇ ದೃಷ್ಟಿಯಲ್ಲಿರಿಸಿಕೊಂಡು ಈ ಮಾತುಗಳನ್ನು ಬರೆದಿದ್ದಾರೆ ಎನ್ನುವುದು ಸ್ಪಷ್ಟವಿದೆ. 

ಅಮಿತಾಭ್‌ ಅವರು ಚಿತ್ರರಂಗದ ಸೆಲೆಬ್ರಿಟಿಗಳ ಪೈಕಿ ಅತ್ಯಧಿಕ ಸಂಖ್ಯೆಯ ಹಿಂಬಾಲಕರನ್ನು ಟ್ವಿಟರ್‌ನಲ್ಲಿ ಹೊಂದಿದ್ದಾರೆ. ಅವರ ಮಾತುಗಳು ಅತ್ಯಂತ ತೂಕದ್ದಾಗಿವೆ. ಅಂತೆಯೇ ಅವರ ಅಭಿಮಾನಿಗಳು ಮತ್ತು ಹಿಂಬಾಲಕರ ಮೇಲೆ ಅದು ಬಲವಾದ ಪರಿಣಾಮವನ್ನೂ ಬೀರುತ್ತದೆ. 

ಈ ನಡುವೆ “ಪದ್ಮಾವತ್‌’ಗೆ ಕೇಂದ್ರ ಸೆನ್ಸಾರ್‌ ಮಂಡಳಿ ನೀಡಿರುವ ಸರ್ಟಿಫಿಕೇಟನ್ನು ರದ್ದು ಮಾಡುವಂತೆ ತುರ್ತು ವಿಚಾರಣೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ತಿರಸ್ಕರಿಸಿದೆ. 

ನಿನ್ನೆಯಷ್ಟೇ ಸುಪ್ರೀಂ ಕೋರ್ಟ್‌ ಪದ್ಮಾವತ್‌ ಚಿತ್ರದ ದೇಶವ್ಯಾಪಿ ಬಿಡುಗಡೆಗೆ ಅವಕಾಶ ಮಾಡಿಕೊಟ್ಟಿತ್ತಲ್ಲದೆ ಸೆನ್ಸಾರ್‌ ಸರ್ಟಿಫಿಕೇಟ್‌ ಪಡೆದ ಚಿತ್ರವನ್ನು ಯಾವುದೇ ರಾಜ್ಯ ಸರಕಾರ ಬಹಿಷ್ಕರಿಸುವಂತಿಲ್ಲ ಎಂದು ಹೇಳಿತ್ತು. 

ಪದ್ಮಾವತ್‌ ವಿರುದ್ಧ ಮತ್ತೆ ಪ್ರಬಲ ಪ್ರತಿಭಟನೆಗೆ ಮುಂದಾಗಿರುವ ರಾಜಪೂತ ಕರ್ಣಿ ಸೇನೆ, ಸೆನ್ಸಾರ್‌ ಮಂಡಳಿ ಮುಖ್ಯಸ್ಥ ಪ್ರಸೂನ್‌ ಜೋಷಿ ಅವರಿಗೆ ನಾವು ರಾಜಸ್ಥಾನಕ್ಕೆ ಕಾಲಿಡಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದೆ. 

ಕರ್ಣಿ ಸೇನೆಯ ಸದಸ್ಯರಾಗಿರುವ ಸುಖದೇವ್‌ ಸಿಂಗ್‌ ಅವರು ಇಂದು ಶುಕ್ರವಾರ ಈ ಬೆದರಿಕೆಯನ್ನು ಹಾಕಿದರು. “ಪದ್ಮಾವತ್‌’ ಐತಿಹಾಸಿಕ ಕಥಾ ಚಿತ್ರಕ್ಕೆ ಸುಪ್ರೀಂ ಕೋರ್ಟ್‌ ಕ್ಲೀನ್‌ ಚಿಟ್‌ ನೀಡಿರುವ ಹೊರತಾಗಿಯೂ ರಾಜಪೂತ್‌ ಕರ್ಣಿ ಸೇನಾ ಕಾರ್ಯಕರ್ತರು ಇಂದು ಬಿಹಾರದ ಮುಜಫ‌ರನಗರದಲ್ಲಿನ ಚಿತ್ರಮಂದಿವೊಂದರ ಮೇಲೆ ದಾಳಿ ನಡೆಸಿ ಹಾನಿ ಉಂಟುಮಾಡಿದ್ದರು. 

ಪದ್ಮಾವತ್‌ ಚಿತ್ರಕ್ಕೆ ಕ್ಲೀನ್‌ ಚಿಟ್‌ ನೀಡಿರುವ ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ನಾವು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ ಕರ್ಣಿ ಸೇನಾ ಹೇಳಿತ್ತು. ಇದೇ ಜನವರಿ 25ರಂದು ಪದ್ಮಾವತ್‌ ಚಿತ್ರ ತೆರೆ ಕಾಣಲಿದೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.