ಅಮಿತಾವ್ಗೆ ಜ್ಞಾನಪೀಠ ಪ್ರಶಸ್ತಿ
Team Udayavani, Dec 15, 2018, 8:10 AM IST
ಹೊಸದಿಲ್ಲಿ: ಇಂಗ್ಲಿಷ್ ಸಾಹಿತ್ಯ ಕ್ಷೇತ್ರದ ಲೇಖಕ, ಕಾದಂಬರಿಗಾರ ಅಮಿತಾವ್ ಘೋಷ್ ಅವರು ಪ್ರಸಕ್ತ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕಾಗಿ ಅವರು ನೀಡಿದ ಅತ್ಯುತ್ತಮ ಕೊಡುಗೆಗಾಗಿ ಈ ಗೌರವ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಪ್ರಶಸ್ತಿ ನೀಡುವ ಭಾರತೀಯ ಜ್ಞಾನಪೀಠ ಸಂಸ್ಥೆ ಶುಕ್ರವಾರ ಹೇಳಿದೆ. ಖ್ಯಾತ ಕಾದಂಬರಿಗಾರ್ತಿ ಪ್ರತಿಭಾ ರಾಯ್ ನೇತೃತ್ವದ ಆಯ್ಕೆ ಸಮಿತಿ ಘೋಷ್ ಹೆಸರನ್ನು ಅಂತಿಮಪಡಿಸಿತು.
‘ಘೋಷ್ ತಮ್ಮ ಕಾದಂಬರಿಗಳ ಮೂಲಕ ಐತಿಹಾಸಿಕ ಕ್ಷಣಗಳನ್ನು ಆಧುನಿಕ ಕಾಲಘಟ್ಟಕ್ಕೆ ಸರಿಯಾಗುವಂತೆ ವಿವರಿಸಿದ್ದಾರೆ. ಕಾದಂಬರಿಯಲ್ಲಿ ವಿಷಯದ ಬಗ್ಗೆ ಅಸಾಧಾರಣ ಆಳ ಮತ್ತು ಜ್ಞಾನವನ್ನೂ ನೀಡುವಂತೆ ಬರೆಯುವುದರ ಮೂಲಕ ತಾವು ಸಮರ್ಥ ಇತಿಹಾಸಕಾರ ಮತ್ತು ಸಾಮಾಜಿಕ ಮಾನವ ಶಾಸ್ತ್ರಜ್ಞ ಎಂಬುದನ್ನು ಸಾಬೀತುಮಾಡಿದ್ದಾರೆ’ ಎಂದು ಸಂಸ್ಥೆ ಹೇಳಿದೆ.
ತಮ್ಮ ಆಯ್ಕೆ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಘೋಷ್, ‘ಆದರಗೊಂಡಿದ್ದೇನೆ ಮತ್ತು ವಿನೀತಗೊಂಡಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. 1956ರಲ್ಲಿ ಪಶ್ಚಿಮ ಬಂಗಾಳದಲ್ಲಿ ಜನಿಸಿದ ಅವರು ‘ಶಾಡೋ ಲೈನ್ಸ್’, ‘ದ ಗ್ಲಾಸ್ ಪ್ಯಾಲೇಸ್’, ‘ದ ಹಂಗ್ರಿ ಟೈಡ್’ ಸೇರಿದಂತೆ ಹಲವು ಜನಪ್ರಿಯ ಕೃತಿಗಳನ್ನು ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ