
AN 32 ರೀತಿಯ ದುರಂತ ಮತ್ತೆ ಸಂಭವಿಸದಂತೆ ನೋಡಿಕೊಳ್ಳುವೆವು: ಐಎಎಫ್ ಮುಖ್ಯಸ್ಥ
Team Udayavani, Jun 15, 2019, 3:34 PM IST

ಹೈದರಾಬಾದ್ : ಅರುಣಾಚಲ ಪ್ರದೇಶದ ಲಿಪೋ ಸಮೀಪದ ಕಡಿದಾದ ಪರ್ವತ ಪ್ರದೇಶದಲ್ಲಿ ಪತನಗೊಂಡು 13 ಜೀವಗಳನ್ನು ಬಲಿಪಡೆದಿದ್ದ ಭಾರತೀಯ ವಾಯುಪಡೆಯ ಎಎನ್ 32 ಸಾರಿಗೆ ವಿಮಾನ ದುರಂತಕ್ಕೆ ಕಾರಣವೇನು ಎಂಬುದನ್ನು ಕಂಡುಕೊಳ್ಳಲಾಗುವುದು ಮತ್ತು ಈ ರೀತಿಯ ದುರಂತಗಳು ಇನ್ನು ಮುಂದೆ ಘಟಿಸದಂತೆ ನೋಡಿಕೊಳ್ಳಲಾಗುವುದು ಎಂದು ಐಎಎಫ್ ಮುಖ್ಯಸ್ಥ ಬಿ ಎಸ್ ಧನೋವಾ ಇಂದು ಶನಿವಾರ ಹೇಳಿದ್ದಾರೆ.
ಎಎನ್ 32 ವಿಮಾನ ಪತನಗೊಂಡ ಹತ್ತು ದಿನಗಳ ತರುವಾಯ ಅದರ ಅವಶೇಷಗಳು ಅರುಣಾಚಲ ಪ್ರದೇಶದ ಲಿಪೋ ಸಮೀಪದ ಎತ್ತರದ ಪರ್ವತ ಪ್ರದೇಶದ ದಟ್ಟಾರಣ್ಯದಲ್ಲಿ ಪತ್ತೆಯಾಗಿ ಎಲ್ಲ 13 ಮೃತ ದೇಹಗಳನ್ನು ಮೇಲೆತ್ತಲಾದುದನ್ನು ಅನುಸರಿಸಿ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು.
ಪತನಗೊಂಡ ವಿಮಾನದ ಫ್ಲೈಟ್ ಡಾಟಾ ರೆಕಾರ್ಡರ್ ಮತ್ತು ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ನಮಗೆ ಸಿಕ್ಕಿದೆ. ಈ ದುರಂತ ಹೇಗೆ ಸಂಭವಿಸಿತು ಎಂಬುದನ್ನು ನಾವು ಕೂಲಂಕಷವಾಗಿ ತಿಳಿಯಲಿದ್ದೇವೆ. ಹಾಗೆಯೇ ಈ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ನಾವು ನೋಡಿಕೊಳ್ಳುವೆವು ಎಂದು ಧನೋವಾ ಸುದ್ದಿಗಾರರಿಗೆ ಹೇಳಿದರು.
ಇಲ್ಲಿಗೆ ಸಮೀಪದ ಡುಂಡಿಗಲ್ ಸಮೀಪದ ವಾಯು ಪಡೆ ಅಕಾಡೆಮಿಯ ಜಂಟಿ ಘಟಿಕೋತ್ಸವದ ಪಾರ್ಶ್ವದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಸೂರ್ಯನಿಂದಾಗಿ ಬಿಸಿಯಾಗಿದೆ ಭೂಮಿ, ಉಪಗ್ರಹಗಳಿಗೆ ಕಂಟಕ!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು