ತಾನು ಬದುಕಿದ್ದೇನೆ ಎಂದು ಪತ್ನಿಗೆ ತಿಳಿಸಲು ಭಾರತೀಯ ಯೋಧನ 100 ರೂ. ಟ್ರಿಕ್!


Team Udayavani, Oct 7, 2019, 8:00 AM IST

Indian-Soldire-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶ್ರೀನಗರ: ದೂರದ ಊರಿನಲ್ಲಿ ಕೆಲಸದಲ್ಲಿರುವವರು ತಮ್ಮ ಕ್ಷೇಮ ಸಮಾಚಾರವನ್ನು ತಮ್ಮ ಮನೆಯವರಿಗೆ ತಿಳಿಸಲು ಮೊಬೈಲ್ ಫೋನ್, ಪತ್ರ ವ್ಯವಹಾರ ಅಥವಾ ಇನ್ನಿತರ ಮಾಧ್ಯಮಗಳನ್ನು ಬಳಸಿಕೊಳ್ಳುವ ಈ ಕಾಲದಲ್ಲಿ ಇಲ್ಲೊಬ್ಬ ಯೋಧ ತಾನು ಸುರಕ್ಷಿತವಾಗಿದ್ದೇನೆ ಎಂದು ತನ್ನ ಪತ್ನಿಗೆ ತಿಳಿಸಲು ನೂರು ರೂಪಾಯಿ ನೋಟನ್ನು ಬಳಸುತ್ತಿದ್ದಾರೆ. ಆಶ್ಚರ್ಯವಾಗುತ್ತಿದೆಯೇ? ಹೌದು, ಆಶ್ಚರ್ಯವಾದರೂ ನೀವಿದನ್ನು ನಂಬಲೇಬೇಕು.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ಧತಿ ಬಳಿಕ ಕಣಿವೆ ರಾಜ್ಯದಲ್ಲಿ ಅನಿರ್ಧಷ್ಟಾವಧಿ ಕರ್ಫ್ಯೂ ವಿಧಿಸಲಾಗಿದೆ ಮಾತ್ರವಲ್ಲದೇ ಮೊಬೈಲ್ ಸಂಪರ್ಕ ಸಹಿತ ಎಲ್ಲಾ ರೀತಿಯ ಸಂವಹನ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇದರ ಬಿಸಿ ಅಲ್ಲಿನ ಸ್ಥಳಿಯರಿಗೆ ಮಾತ್ರವಲ್ಲದೇ ಆ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತೀಯ ಯೋಧರಿಗೂ ತಟ್ಟಿದೆ. ಕಣಿವೆ ರಾಜ್ಯದ ವಿವಿಧ ಕಡೆಗಳಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಯೋಧರು ತಮ್ಮ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಸಾಧ್ಯವಾಗದೇ ಪರದಾಡುವಂತಾಗಿದೆ. ಇದಕ್ಕೆ ಯೋಧರೊಬ್ಬರು ವಿಶಿಷ್ಟ ಉಪಾಯ ಒಂದನ್ನು ಕಂಡುಕೊಂಡಿದ್ದಾರೆ.

ಬಾರಾಮುಲ್ಲಾದ ಖ್ವಾಜಾ ಭಾಗ್ ಪ್ರದೇಶದಲ್ಲಿ ಕರ್ತವ್ಯ ನಿರತರಾಗಿರುವ ಭಾರತೀಯ ಸೇನೆಯ ಯೋಧರೊಬ್ಬರು ಪ್ರತೀದಿನ ಎಟಿಎಂಗೆ ಹೋಗಿ ನೂರು ರೂಪಾಯಿಗಳನ್ನು ತೆಗೆಯುತ್ತಾರೆ. ಹೀಗೆ ಮಾಡುವುದರಿಂದ ಅವರ ಕುಟುಂಬದವರಿಗೆ ಈ ಯೋಧನ ಕ್ಷೇಮದ ಕುರಿತು ಹೇಗೆ ಮಾಹಿತಿ ಸಿಗುತ್ತದೆ ಎಂದು ಆಶ್ಚರ್ಯವಾಗುತ್ತಿದೆಯೇ?

ಹೌದು, ಆ ಯೋಧ ಕೊಟ್ಟ ಮಾಹಿತಿ ಪ್ರಕಾರ ಅವರ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ನಂಬರನ್ನು ಅವರ ಪತ್ನಿ ಬಳಸುತ್ತಿದ್ದಾರಂತೆ. ಹೀಗಾಗಿ ಪ್ರತೀ ದಿನ ಇವರು ಎಟಿಎಂನಿಂದ ಹಣ ತೆಗೆದ ಕೂಡಲೇ ಅವರ ಪತ್ನಿಯ ಮೊಬೈಲ್ ಗೆ ಸಂದೇಶ ಹೋಗುತ್ತದೆ. ಇದನ್ನು ನೋಡಿದ ತಕ್ಷಣ ಈ ಯೋಧನ ಪತ್ನಿಗೆ ಮತ್ತು ಅವರ ಕುಟುಂಬದವರಿಗೆ ಇವರು ಕ್ಷೇಮವಾಗಿದ್ದಾರೆ ಎಂಬ ಸಂದೇಶ ತಲುಪುತ್ತದೆ. ಎಟಿಂನಲ್ಲಿ ಕನಿಷ್ಠ 100 ರೂಪಾಯಿಗಳನ್ನು ತೆಗೆಯಲು ಸಾಧ್ಯವಾಗುವುದರಿಂದ ಇವರು ಪ್ರತೀ ದಿನ ಎಟಿಎಂಗೆ ಹೋಗಿ 100 ರೂಪಾಯಿಗಳನ್ನು ವಿತ್ ಡ್ರಾ ಮಾಡುತ್ತಾರೆ.

ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವನ್ನು ಕಳೆದುಕೊಂಡಿರುವ ಕಾಶ್ಮೀರ ಕಣಿವೆಯಲ್ಲಿ ಸಂವಹನ ಎಷ್ಟು ಕಷ್ಟಸಾಧ್ಯವಾಗಿದೆ ಎಂಬುದನ್ನು ಈ ಒಂದು ಘಟನೆ ಸಾರಿ ಹೇಳುತ್ತಿದೆ. ಮನೆಯವರಿಗೆ ತನ್ನ ಕ್ಷೇಮ ಸಮಾಚಾರವನ್ನು ತಿಳಿಸಲು ಈ ಯೋಧ ಅನುಸರಿಸಿರುವ ಈ ವಿಶಿಷ್ಟ ವಿಧಾನವನ್ನು ಕೇಳಿ ಎಟಿಎಂ ಭದ್ರತಾ ಸಿಬ್ಬಂದಿ ಮತ್ತು ಅಲ್ಲಿದ್ದ ಸ್ಥಳೀಯರು ಒಂದರೆಕ್ಷಣ ಭಾವುಕರಾಗಿದ್ದಾರೆ. ‘ಇಂಡಿಯನ್ ಆರ್ಮಿ ಫ್ಯಾನ್ಸ್’ ಎಂಬ ಫೇಸ್ಬುಕ್ ಪುಟದಲ್ಲಿ ಈ ಘಟನೆಯನ್ನು ಹಂಚಿಕೊಳ್ಳಲಾಗಿದೆ. ಮತ್ತು ಈ ಪೋಸ್ಟ್ ಅನ್ನು 7 ಸಾವಿರ ಮಂದಿ ಶೇರ್ ಮಾಡಿಕೊಂಡಿದ್ದಾರೆ.

 

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.