ಬುದ್ಗಾಮ್ ಸರ್ಕಾರಿ ಕಚೇರಿಯಲ್ಲಿ ಉಗ್ರರ ಗುಂಡಿನ ದಾಳಿ: ಕಾಶ್ಮೀರಿ ಪಂಡಿತ್ ಬಲಿ
Team Udayavani, May 12, 2022, 6:48 PM IST
ಶ್ರೀನಗರ : ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಕಾಶ್ಮೀರ ಪಂಡಿತ್ ಸಮುದಾಯಕ್ಕೆ ಸೇರಿದ ಸರ್ಕಾರಿ ನೌಕರನನ್ನು ಕಚೇರಿಯಲ್ಲಿ ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ.ಕಂದಾಯ ಇಲಾಖೆ ಉದ್ಯೋಗಿ ರಾಹುಲ್ ಭಟ್ ಅವರು ಚಾದೂರ ಪ್ರದೇಶದ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಇಬ್ಬರು ಉಗ್ರರು ಪಿಸ್ತೂಲು ಬಳಸಿ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯ ವರದಿ ಬಹಿರಂಗ ಪಡಿಸಿದ್ದಾರೆ.
ಉಗ್ರರ ದಾಳಿ ನಡೆದ ತತ್ ಕ್ಷಣ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದು, ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.