ಮಧ್ಯಪ್ರದೇಶ: ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಪುರಾತನ 26 ದೇವಾಲಯ, ಬೌದ್ಧ ವಿಹಾರ ಪತ್ತೆ

ಈ ಪ್ರದೇಶ ಸುಮಾರು 170 ಚದರ ಕಿಲೋ ಮೀಟರ್ ವಿಸ್ತೀರ್ಣ ಹೊಂದಿರುವುದಾಗಿ ವರದಿ ವಿವರಿಸಿದೆ.

Team Udayavani, Sep 29, 2022, 4:49 PM IST

ಮಧ್ಯಪ್ರದೇಶ: ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಪುರಾತನ 26 ದೇವಾಲಯ, ಬೌದ್ಧ ವಿಹಾರ ಪತ್ತೆ

ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮಧ್ಯಪ್ರದೇಶದ ಬಾಂಧವ್ ಗಢ್ ನಲ್ಲಿ ಉತ್ಖನನ ನಡೆಸಿದ ವೇಳೆ ಪುರಾತನ ಗುಹೆ, ದೇವಾಲಯಗಳು, ಬೌದ್ಧರ ಕಾಲದ ಅವಶೇಷಗಳು, ಮಥುರಾ, ಕೌಶಂಬಿ ನಗರಗಳ ಹೆಸರನ್ನು ಹೊಂದಿರುವ ಪುರಾತನ ಲಿಪಿಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಹಾಲಿವುಡ್ ಡೈರೆಕ್ಟರ್ ಜೊತೆ ಕಾಣಿಸಿಕೊಂಡ ಯಶ್; ಏನಿದು ಕಲಾಶ್ನಿಕೋವ್ ಗನ್ ಕಥೆ?

1938ರ ನಂತರ ಮೊದಲ ಬಾರಿಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳ ತಂಡ ಬಾಂಧವ್ ಗಢ್ ಹುಲಿ ರಕ್ಷಿತಾರಣ್ಯ ಪ್ರದೇಶದಲ್ಲಿ ಸುಮಾರು ಒಂದು ತಿಂಗಳ ಕಾಲ ಉತ್ಖನನ ನಡೆಸಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಈ ಪ್ರದೇಶ ಸುಮಾರು 170 ಚದರ ಕಿಲೋ ಮೀಟರ್ ವಿಸ್ತೀರ್ಣ ಹೊಂದಿರುವುದಾಗಿ ವರದಿ ವಿವರಿಸಿದೆ.

ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಉತ್ಖನನ ಕಾರ್ಯಾಚರಣೆಯಲ್ಲಿ 26 ದೇವಾಲಯಗಳು, 26 ಗುಹೆಗಳು, 2 ಬೌದ್ಧ ವಿಹಾರ,  2 ಸ್ತೂಪ, 24 ಶಿಲಾಶಾಸನಗಳು, 46 ಶಿಲ್ಪಗಳು ಹಾಗೂ 19 ನೀರಿನ ಮಾರ್ಗದ ರಚನೆಯನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದೆ.

ಮೇ 20ರಿಂದ ಜೂನ್ 27ರವರೆಗೆ ನಡೆಸಿದ ಉತ್ಖನನದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಜಬಲ್ಪುರ್ ವಲಯ ಕೂಡಾ ಅನೇಕ ಪ್ರಾಚೀನ ಶಿಲ್ಪಗಳು ದೊರೆತಿರುವುದಾಗಿ ವರದಿ ನೀಡಿತ್ತು. ಇದರಲ್ಲಿ ಭಗವಾನ್ ವಿಷ್ಣುವಿನ ಅವತಾರಗಳಲ್ಲಿ ಒಂದಾದ ವರಾಹ ಮತ್ತು ಮತ್ಸ್ಯ ಶಿಲ್ಪ ಮತ್ತು ನೈಸರ್ಗಿಕ ಗುಹೆಯಲ್ಲಿ ಕೊರೆದ ಬೋರ್ಡ್ ಆಟಗಳು ಸೇರಿದಂತೆ ಹಲವು ಶಿಲ್ಪಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಜಬಲ್ಪುರ್ ಸರ್ಕಲ್ ನ ಹಿರಿಯ ಪುರಾತತ್ವ ಶಾಸ್ತ್ರಜ್ಞ ಎಸ್.ಕೆ. ಬಾಜ್ ಪೈ ನೇತೃತ್ವದ ತಂಡ ಉತ್ಖನನ ಕೈಗೊಂಡಿದ್ದು, ಈ ಬಗ್ಗೆ ನವದೆಹಲಿಯ ಎಎಸ್ ಐ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ಉತ್ಖನನ ಕುರಿತ ಮಾಹಿತಿ ಮತ್ತು ಚಿತ್ರಗಳ ಕುರಿತು ವಿವರ ನೀಡಿರುವುದಾಗಿ ವರದಿ ತಿಳಿಸಿದೆ.

ನನಗೆ ಹಿಂದೂ ರಾಜವಂಶ ಆಳ್ವಿಕೆ ನಡೆಸಿದ ಪ್ರದೇಶದಲ್ಲಿ ಬೌದ್ಧರ ರಚನೆಗಳ ಅವಶೇಷ ಕಂಡು ಬಂದಿರುವುದು ಅಚ್ಚರಿ ಮೂಡಿಸಿತ್ತು. ಇದು ಧಾರ್ಮಿಕ ಸಾಮರಸ್ಯವನ್ನು ಸೂಚಿಸುತ್ತದೆ. ಆದರೆ ಬೌದ್ಧ ರಚನೆಗಳನ್ನು ಯಾರು ನಿರ್ಮಿಸಿದ್ದರು ಎಂಬ ಬಗ್ಗೆ ತಿಳಿದುಬಂದಿಲ್ಲ ಎಂದು ಬಾಜ್ ಪೈ ತಿಳಿಸಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.