ಆಂಧ್ರಪ್ರದೇಶ : ಬಸ್ಸು ಕಾಲುವೆಗೆ ಉರುಳಿ 10 ಸಾವು, ಅನೇಕರಿಗೆ ಗಾಯ


Team Udayavani, Feb 28, 2017, 10:52 AM IST

Andhra Bus accident-700.jpeg

ವಿಜಯವಾಡ : ಹೈದರಾಬಾದ್‌ಗೆ ಹೋಗುತ್ತಿದ್ದ  ದಿವಾಕರ್‌ ಟ್ರಾವಲ್‌ ಏಜನ್ಸಿಯ ಬಸ್ಸು ಇಂದು ಬೆಳಗ್ಗೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಮುಲ್ಲುಪಾಡು ಎಂಬ ಗ್ರಾಮಕ್ಕೆ ಸಮೀಪದ ಎರಡು ಫ್ಲೈ ಓವರ್‌ಗಳ ನಡುವೆ ಸಾಗುತ್ತಿದ್ದಾಗ ಕಾಲುವೆಗೆ ಉರುಳಿ ಬಿದ್ದ ಪರಿಣಾಮವಾಗಿ ಕನಿಷ್ಠ 10 ಜನರು ಮಡಿದು  ಇತರ ಹಲವರು ಗಾಯಗೊಂಡ ಘಟನೆ ವರದಿಯಾಗಿದೆ.

ಭುವನೇಶ್ವರದಿಂದ ಬರುತ್ತಿದ್ದ ಈ ನತದೃಷ್ಟ ಬಸ್ಸಿನಲ್ಲಿ 38 ಪ್ರಯಾಣಿಕರಿದ್ದರು. ವಿಶಾಖಪಟ್ಟಣದಲ್ಲಿ ಸ್ವಲ್ಪ ಹೊತ್ತು ನಿಂತು ಈ ಬಸ್ಸು ಅನಂತರ ತನ್ನ ಪ್ರಯಾಣವನ್ನು ಮುಂದುವರಿಸಿತ್ತು. 

ಕಾಲುವೆಗೆ ಉರುಳಿ ಬಿದ್ದಿರುವ ಬಸ್ಸಿನ ಮುಂಭಾಗ ತೀವ್ರವಾಗಿ ನಜ್ಜುಗುಜ್ಜಾಗಿದ್ದು ಬಸ್ಸಿನೊಳಗೆ ಹಲವು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳು ಪ್ರಯಾಣಿಕರನ್ನು ವಿಜಯವಾಡ ಮತ್ತು ನಂದಿಗಾಮಾದ ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

ಬಸ್ಸು   ಫ್ಲೈ ಓವರ್‌ನ ಉಕ್ಕಿನ ಬೇಲಿಯನ್ನು ಭೇದಿಸಿ ಮುನ್ನುಗ್ಗಿ ಕಾಲುವೆಗೆ ಅಡಿ ಮೇಲಾಗಿ ಧುಮುಕಿರುವುದರಿಂದ ಅನೇಕರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಮೂಳೆ ಮುರಿತ ಉಂಟಾಗಿದೆ. 

ವಿಜಯವಾಡದಲ್ಲಿನ ಆಂಧ್ರ ಆಸ್ಪತ್ರೆಗೆ ದಾಖಲಾಗಿರುವ ಓರ್ವ ಗಾಯಾಳು, “ಬಸ್ಸಿನ ಚಾಲಕನು ತೀವ್ರ ನಿದ್ದೆಗಣ್ಣಿನಲ್ಲಿದ್ದುದನ್ನು ತಾನು ಕಂಡಿದ್ದೇನೆ’ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 

ಉಪ ಮುಖ್ಯಮಂತ್ರಿ (ಗೃಹ) ಎನ್‌ ಚಿನ್ನ ರಾಜಪ್ಪ ಅವರು ತ್ವರಿತ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಕೃಷ್ಣಾ ಜಿಲ್ಲೆಯ ಪೊಲೀಸ್‌ ಮುಖ್ಯಸ್ಥರಿಗೆ ಸೂಚಿಸಿದ್ದಾರೆ. 

ಬಸ್ಸಿನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ವಿಶಾಖಪಟ್ಟಣ, ಭುವನೇಶ್ವರ, ಶ್ರೀಕಾಕುಳಂ ಮತ್ತು ಹೈದರಾಬಾದಿನವರಾಗಿದ್ದಾರೆ. ತೆಲುಗು ದೇಶಂ ಪಕ್ಷದ ಅನಂತಪುರ ಸಂಸದ ಜೆ ಸಿ ದಿವಾಕರ ರೆಡ್ಡಿ ಒಡೆತನದ ದಿವಾಕರ ಟ್ರಾವೆಲ್‌ ಏಜನ್ಸಿಯ ಬಸ್ಸು ಭೀಕರ ಅಪಘಾತಕ್ಕೆ ಗುರಿಯಾಗಿರುವ ಎರಡನೇ ಪ್ರಕರಣ ಇದಾಗಿದೆ. 

2013ರ ಅಕ್ಟೋಬರ್‌ನಲ್ಲಿ ಜಬ್ಟಾರ್‌ ಟ್ರಾವೆಲ್ಸ್‌ ಸಂಸ್ಥೆಯಿಂದ ಲೀಸಿಗೆ ಪಡೆಯಲಾಗಿದ್ದ ದಿವಾಕರ್‌ ಟ್ರಾವೆಲ್ಸ್‌ ಸಂಸ್ಥೆಯ ಮಲ್ಟಿ ಆ್ಯಕ್ಸೆಲ್‌ ವೋಲ್‌ವೋ ಬಸ್ಸು ಬೆಂಗಳೂರಿನಿಂದ ಹೈದರಾಬಾದಿಗೆ ಬರುತ್ತಿದ್ದಾಗ ಮೆಹಬೂಬ್‌ನಗರ ಜಿಲ್ಲೆಯ ಕೋಥಕೋಟ ಎಂಬಲ್ಲಿ  ಬೆಂಕಿಗೆ ಆಹುತಿಯಾದ ದುರ್ಘ‌ಟನೆಯಲ್ಲಿ 45 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು. 

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.