ಸುಪ್ರೀಂ ಜಡ್ಜ್ ಎನ್ ವಿ ರಮಣ, ಆಂಧ್ರ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಜಗನ್ ಆಕ್ರೋಶ
Team Udayavani, Oct 11, 2020, 12:10 PM IST
ಹೊಸದಿಲ್ಲಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದು, ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶ ಎನ್ ವಿ ರಮಣ ಆಂಧ್ರ ಪ್ರದೇಶ ಹೈಕೋರ್ಟ್ ನ ನ್ಯಾಯಾಧೀಶರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಅಮರಾವತಿ ಭೂ ಹಗರಣ ಪ್ರಕರಣದ ಸಂಬಂಧ ಜಗನ್ ಎಂಟು ಪುಟಗಳ ಪತ್ರವನ್ನು ಸಿಜೆಐ ಶರದ್ ಬೋಬ್ಡೆ ಅವರಿಗೆ ಬರೆದಿದ್ದಾರೆ.
ಇದನ್ನೂ ಓದಿ:ಶಿಕ್ಷಕರ ಮಧ್ಯಂತರ ರಜೆ ರದ್ದುಗೊಳಿಸಿದ ಸರ್ಕಾರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ನ್ಯಾಯಾಧೀಶ ಎನ್. ವಿ. ರಮಣ ಅವರು ತೆಲುಗು ದೇಶಂ ಪಾರ್ಟಿ ಮತ್ತು ಅದರ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಹಿತ ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ್ದು, ಸಿಜೆಐ ವಸ್ತುಸ್ಥಿತಿಯನ್ನು ಪರಿಶೀಲಿಸಬೇಕು ಮತ್ತು ರಾಜ್ಯ ನ್ಯಾಯಾಂಗದ ತಟಸ್ಥತೆಯನ್ನು ಕಾಪಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಸೂಕ್ತವೆಂದು ಪರಿಗಣಿಸಬಹುದಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.