ನಕ್ಸಲ್‌ ದಾಳಿ: ಶಾಸಕನ ಹತ್ಯೆ


Team Udayavani, Sep 24, 2018, 2:02 PM IST

naxal-15-4.jpg

ಅಮರಾವತಿ: ಹಲವು ವರ್ಷಗಳ ಬಳಿಕ ಮತ್ತೆ ಸಕ್ರಿಯರಾಗಿರುವ ಮಾವೋವಾದಿಗಳು, ಆಂಧ್ರಪ್ರದೇಶದಲ್ಲಿ ಹಾಡಹಗಲೇ ರಕ್ತ ಹರಿಸಿದ್ದಾರೆ. ರವಿವಾರ ಟಿಡಿಪಿ ಶಾಸಕ ಕಿದರಿ ಸರ್ವೇಶ್ವರ ರಾವ್‌ ಮತ್ತು ಟಿಡಿಪಿ ನಾಯಕ ಸಿವೇರಿ ಸೋಮ ಎಂಬುವರನ್ನು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ವಿಶಾಖಪಟ್ಟಣ ಜಿಲ್ಲೆಯ ಲಿಪ್ಪಿಟಿಪುಟ್ಟ ಗ್ರಾಮದಲ್ಲಿ ರವಿವಾರ ‘ಗ್ರಾಮ ದರ್ಶಿನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಈ ಘಟನೆ ನಡೆದಿದೆ. ಸುಮಾರು 60ಕ್ಕೂ ಹೆಚ್ಚು ಮಾವೋವಾದಿಗಳು (ಈ ಪೈಕಿ ಹೆಚ್ಚಿನವರು ಮಹಿಳೆಯರು ಮತ್ತು ಗ್ರಾಮಸ್ಥರು) ಹತ್ಯಾಕಾಂಡದಲ್ಲಿ ಭಾಗವಹಿಸಿದ್ದರು ಎನ್ನಲಾಗಿದ್ದು, ನಿಖರ ಮಾಹಿತಿ ಇನ್ನೂ ಸಿಕ್ಕಿಲ್ಲ ಎಂದು ವಿಶಾಖಪಟ್ಟಣ ವಲಯದ ಡಿಜಿಪಿ ಸಿಎಚ್‌ ಶ್ರೀಕಾಂತ್‌ ಹೇಳಿದ್ದಾರೆ.

‘ಶಾಸಕರ ಕಾರನ್ನು ಮಾವೋವಾದಿಗಳ ಗುಂಪು ಸುತ್ತುವರಿಯಿತು. ಕಿದರಿ ಸರ್ವೇಶ್ವರ ರಾವ್‌ ಅವರ ಭದ್ರತಾ ಸಿಬಂದಿ ಕಾರಿನಿಂದ ಇಳಿದು ಏನಾಯಿತು ಎಂದು ಪರಿಶೀಲಿಸುವಷ್ಟರಲ್ಲಿ ಅವರ ಕೈಯ್ಯಲ್ಲಿದ್ದ ಎ.ಕೆ.47 ರೈಫ‌ಲ್‌ ಕಸಿದುಕೊಳ್ಳಲಾಯಿತು. ಈ ವೇಳೆ ಶಾಸಕ ಮತ್ತು ಟಿಡಿಪಿ ನಾಯಕ ಕಾರಿನಿಂದ ಇಳಿದರು. ತಕ್ಷಣವೇ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಯಿತು’ ಎಂದು ಡಿಜಿಪಿ ಹೇಳಿದ್ದಾರೆ. ಬಹಳ ವರ್ಷಗಳ ಬಳಿಕ ಆಂಧ್ರದಲ್ಲಿ ಮಾವೋವಾದಿಗಳಿಂದ ರಾಜಕೀಯ ನಾಯಕರ ಮೇಲೆ ದಾಳಿ ನಡೆದಿದೆ.


ಮಾವೋವಾದಿಗಳ ಆಂಧ್ರ-ಒಡಿಶಾ ಸಮಿತಿ ಕಾರ್ಯದರ್ಶಿ ರಾಮಕೃಷ್ಣ ನೇತೃತ್ವದಲ್ಲಿ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಶ್ರೀಕಾಂತ್‌ ಹೇಳಿದ್ದಾರೆ. ಅಸುನೀಗಿದ ಶಾಸಕ ಸರ್ವೇಶ್ವರ ರಾವ್‌ 2014ರ ಚುನಾವಣೆಯಲ್ಲಿ ವೈಎಸ್ಸಾರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಅರಕು ಮೀಸಲು ಕ್ಷೇತ್ರದಿಂದ ಗೆದ್ದಿದ್ದರು. ನಂತರ 2016ರಲ್ಲಿ ಟಿಡಿಪಿಗೆ ಸೇರ್ಪಡೆಯಾಗಿದ್ದರು. ಪಕ್ಷದ ಶಾಸಕ ಮತ್ತು ನಾಯಕನ ಹತ್ಯೆ ಕುರಿತು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಖಂಡನೆ ವ್ಯಕ್ತಪಡಿಸಿದ್ದಾರೆ. ಸದ್ಯ ಅವರು ನ್ಯೂಯಾರ್ಕ್‌ ಪ್ರವಾಸದಲ್ಲಿದ್ದಾರೆ.

ಟಿಡಿಪಿ ಶಾಸಕ ಸರ್ವೇಶ್ವರ ರಾವ್‌ ಮತ್ತು ಸಿವೇರಿ ಸೋಮ ಅವರಿಗೆ ಮಾವೋವಾದಿಗಳಿಂದ ಹಲವು ಬಾರಿ ಬೆದರಿಕೆ ಕರೆ ಬಂದಿತ್ತು ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಜುಲೈನಲ್ಲಿ ಗುಡ ಎಂಬ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ನಡೆಸುವ ನಿಮಿತ್ತ ಭಾವನ ಹೆಸರಲ್ಲಿ ಶಾಸಕ ಪರವಾನಗಿ ಪಡೆದಿದ್ದರು ಎಂದು ಹೇಳಲಾಗಿತ್ತು. ಅದಕ್ಕಾಗಿ ಸ್ಥಳೀಯರಿಂದ ವ್ಯಾಪಕ ಪ್ರತಿಭಟನೆಯೂ ಎದುರಾಗಿತ್ತು. 2016ರ ಅ.24ರಂದು ಆಂಧ್ರ-ಒಡಿಶಾ ಗಡಿಯಲ್ಲಿ ನಡೆದ ಎನ್‌ಕೌಂಟರ್‌ ವೇಳೆ 27 ಮಂದಿ ನಕ್ಸಲೀಯರನ್ನು ಹತ್ಯೆಗೈಯಲಾಗಿತ್ತು. ತದನಂತರ ಆಂಧ್ರದಲ್ಲಿ ಮಾವೋವಾದಿಗಳ ಅಟ್ಟಹಾಸ ಇಳಿದಿತ್ತು.

ವಿದೇಶಿ ನಿರ್ಮಿತ ಟೆಲಿಸ್ಕೋಪ್‌ ವಶಕ್ಕೆ
ಇದೇ ವೇಳೆ ಛತ್ತೀಸ್‌ಗಢ ಪೊಲೀಸರು ನಾರಾಯಣಪುರ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲರು ಬಳಕೆ ಮಾಡುವ ವಿದೇಶಿ ನಿರ್ಮಿತ ಟೆಲಿಸ್ಕೋಪ್‌ ವಶಕ್ಕೆ ಪಡೆದಿದ್ದಾರೆ. ನಕ್ಸಲರ ಜತೆಗಿನ ಎನ್‌ಕೌಂಟರ್‌ ಬಳಿಕ ನಡೆಸಲಾದ ಶೋಧದ ವೇಳೆ ಇದು ಪತ್ತೆಯಾಗಿದೆ. ನಕ್ಸಲರ ಬಳಿ ಅತ್ಯಾಧುನಿಕವಾಗಿರುವ ಟೆಲಿಸ್ಕೋಪ್‌ ಹೇಗೆ ಸೇರಿತು ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಹತ್ಯೆ ಬಳಿಕ ರೊಚ್ಚಿಗೆದ್ದ ಗ್ರಾಮಸ್ಥರು 
ಶಾಸಕ ಮತ್ತು ಪಕ್ಷದ ನಾಯಕನ ಹತ್ಯೆಯಿಂದ ರೊಚ್ಚಿಗೆದ್ದಿರುವ ಟಿಡಿಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಭಾರೀ ದಾಂಧಲೆ ನಡೆಸಿದ್ದಾರೆ. ವಿಶಾಖಪಟ್ಟಣ ಜಿಲ್ಲೆಯ ದುಂಬ್ರಿಗುಡ ಮತ್ತು ಅರಕು ಪೊಲೀಸ್‌ ಠಾಣೆಯ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದ್ದಾರೆ. ಠಾಣೆಯೊಳಗಿದ್ದ ಪೀಠೊಪಕರಣಗಳು ಹಾಗೂ ಇತರೆ ವಸ್ತುಗಳಿಗೆ ಹಾನಿ ಮಾಡಿದ್ದಾರೆ. 2 ಠಾಣೆಗಳಿಗೆ ನುಗ್ಗಿ ಕೈಗೆ ಸಿಕ್ಕ ವಸ್ತುಗಳು, ಟೇಬಲ್‌, ಕುರ್ಚಿಗಳನ್ನು ಹೊರಕ್ಕೆ ಎಸೆದು, ಬೆಂಕಿ ಹಚ್ಚುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇಬ್ಬರು ನಾಯಕರಿಗೆ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿರಲಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಮೃತ ನಾಯಕರು ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಒಡಿಶಾ ಗಡಿ ಸಮೀಪದ ದುಂಬ್ರಿಗುಡ ಮಂಡಲ್‌ಗೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.