ಆಂಧ್ರಪ್ರದೇಶ ಎಸಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ
Team Udayavani, May 21, 2018, 3:11 PM IST
ಹೊಸದಿಲ್ಲಿ : ಆಂಧ್ರಪ್ರದೇಶದ ಎಸಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಿಗೆ ಗ್ವಾಲಿಯರ್ನಲ್ಲಿ ಬಿರ್ಲಾನಗರ ಸ್ಟೇಶನ್ ಬಳಿ ಬೆಂಕಿಹೊತ್ತಿಕೊಂಡ ಘಟನೆ ಇಂದು ಸೋಮವಾರ ಬೆಳಗ್ಗೆ ನಡೆದಿದೆ.
ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿವೆ ಆದರೆ ಯಾವುದೇ ಜೀವಹಾನಿ ಅಗಿಲ್ಲ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಗ್ವಾಲಿಯರ್ನ ಬಿರ್ಲಾ ನಗರ ನಿಲ್ದಾಣದ ಸಮೀಪ ಬೆಳಗ್ಗೆ 11.50ರ ಹೊತ್ತಿಗೆ ರೈಲು ಸಾಗುತ್ತಿದ್ದಾಗ ಅದರ ಬಿ6 ಸಂಖ್ಯೆಯ ಕೋಚ್ನಲ್ಲಿ ಬೆಂಕಿ ಉರಿಯುತ್ತಿರುವುದು ಕಂಡು ಬಂತು.
ಹೈಟೆನ್ಶನ್ ವಯರ್ ರೈಲಿನ ಮೇಲೆ ಉರುಳಿ ಬಿದ್ದ ಪರಿಣಾಮವಾಗಿ ಬಿ6 ಮತ್ತು ಬಿ7 ಕೋಚ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ರೈಲ್ವೆ ಪಿಆರ್ಓ ಮನೋಜ್ ಕುಮಾರ್ ತಿಳಿಸಿದ್ದಾರೆ.
ಕೂಡಲೇ ರೈಲನ್ನು ನಿಲ್ಲಿಸಿ ಬಿ6 ಮತ್ತು ಬಿ7 ಕೋಚ್ಗಳಲ್ಲಿನ ಪ್ರಯಾಣಿಕರನ್ನು ಗಾರ್ಡ್ಗಳು ಇತರ ಕೋಚ್ಗಳಿಗೆ ವರ್ಗಾಯಿಸಿದರು.
ಇನ್ನೋರ್ವ ರೈಲ್ವೆ ಅಧಿಕಾರಿ ಅಮಿತ್ ಮಾಳವೀಯ ತಿಳಿಸಿರುವ ಪ್ರಕಾರ ಬೆಂಕಿ ಹೊತ್ತಿಕೊಂಡ ಎರಡು ಬೋಗಿಗಳನ್ನು ರೈಲಿನಿಂದ ಪ್ರತ್ಯೇಕಿಸಲಾಗಿ ಉಳಿದ ಬೋಗಿಗಳು ಗ್ವಾಲಿಯರ್ನತ್ತ ಸಾಗಿದವು.
ಬೆಂಕಿಯನ್ನು ನಂದಿಸಲು ಒಡನೆಯೇ ಮೂರು ಅಗ್ನಿಶಾಮಕಗಳನ್ನು ಕಳುಹಿಸಲಾಯಿತು; ಅವುಗಳ ಜಂಟಿ ಕಾರ್ಯಾಚರಣೆಯಲ್ಲಿ ಬೆಂಕಿಯನ್ನು ನಂದಿಸಲಾಯಿತು.
ರೈಲು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಹೊಸದಿಲ್ಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣಕ್ಕೆ ಹೋಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ