ಹೊಸ ವರ್ಷದ ಮೊದಲ ದಿನ ಅಸ್ತಿತ್ವಕ್ಕೆ ಬಂದ ಆಂಧ್ರ ಪ್ರದೇಶ ಹೈಕೋರ್ಟ್‌


Team Udayavani, Jan 1, 2019, 10:40 AM IST

ap-high-court-600.jpg

ಅಮರಾವತಿ, ಆಂಧ್ರ ಪ್ರದೇಶ : ರಾಜ್ಯ ವಿಭಜನೆಗೊಂಡು ತೆಲಂಗಾಣ ಸೃಷ್ಟಿಯಾದ ನಾಲ್ಕು ವರ್ಷಗಳ ಬಳಿಕ, 2019ರ ಹೊಸ ವರ್ಷದ ದಿನವಾದ ಇಂದು ಮಂಗಳವಾರ, ಆಂಧ್ರ ಪ್ರದೇಶ ಹೈಕೋರ್ಟ್‌ ಅಸ್ತಿತ್ವಕ್ಕೆ ಬಂದಿತು.

ಪ್ರಭಾರ ಮುಖ್ಯ ನ್ಯಾಯಾಧೀಶ ಸಿ ಪ್ರವೀಣ್‌ ಕುಮಾರ್‌ ಮತ್ತು ಇತರ 13 ನ್ಯಾಯಾಧೀಶರಿಗೆ ರಾಜ್ಯಪಾಲ ಇ ಎಸ್‌ ಎಲ್‌ ನರಸಿಂಹನ್‌ ಅವರು  ವಿಜಯವಾಡಕ್ಕೆ ಸಮೀಪ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಬೋಧಿಸಿದರು. 

ರಾಷ್ಟ್ರಪತಿ ರಾಮ ನಾಥ್‌ ಕೋವಿಂದ್‌ ಅವರು ಕಳೆದ ವಾರವಷ್ಟೇ ಆಂಧ್ರ ಪ್ರದೇಶಕ್ಕೆ ಪ್ರತ್ಯೇಕ ಉಚ್ಚ ನ್ಯಾಯಾಲಯವನ್ನು ಆದೇಶಿಸಿದ್ದರು. 

ಈ ವರೆಗೂ ಹೈದರಾಬಾದ್‌ ನಲ್ಲಿನ ಹೈಕೋರ್ಟ್‌, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಒಂದೇ ಉಚ್ಚ ನ್ಯಾಯಾಲಯವಾಗಿ ಕಾರ್ಯನಿರ್ವಹಿಸುತ್ತಿತ್ತು. 

ಇಂದು ಪ್ರಮಾಣ ವಚನ ಸ್ವೀಕರಿಸಿದ 13 ನ್ಯಾಯಾಧೀಶರೆಂದರೆ : ಎಸ್‌ ವಿ ಭಟ್‌, ಎ ವಿ ಶೇಷ ಸಾಯಿ, ಎಂ ಸೀತಾರಾಮ ಮೂರ್ತಿ,  ಯು ದುರ್ಗಾ ಪ್ರಸಾದ್‌ ರಾವ್‌, ಟಿ ಸುನೀಲ್‌ ಚೌಧರಿ,  ಎಂ ಸತ್ಯನಾರಾಯಣ ಮೂರ್ತಿ, ಜಿ ಶ್ಯಾಮ ಪ್ರಸಾದ್‌, ಜೆ ಉಮಾ ದೇವಿ, ಎನ್‌ ಬಾಲಯೋಗಿ, ಟಿ ರಜನಿ, ಡಿ ವಿ ಎಸ್‌ ಎಸ್‌ ಸೋಮಯಾಜುಲು, ಕೆ ವಿಜಯ ಲಕ್ಷ್ಮೀ  ಮತ್ತು ಎಂ ಗಂಗಾ ರಾವ್‌.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ಇದೊಂದು ಐತಿಹಾಸಿಕ  ದಿನ ಎಂದು ಹೇಳಿದರು.

ಆಂಧ್ರ ಪ್ರದೇಶ ಹೈಕೋರ್ಟಿಗೆಂದು ನಿರ್ಮಾಣವಾಗುತ್ತಿರುವ ತಾತ್ಕಾಲಿಕ ಕಟ್ಟಡವು ಈಗಿನ್ನೂ ಸಿದ್ಧವಾಗಿಲ್ಲದಿರುವುದರಿಂದ ರಾಜ್ಯ ಸರಕಾರ, ವಿಜಯವಾಡದಲ್ಲಿನ ಮುಖ್ಯಮಂತ್ರಿಗಳ ಕ್ಯಾಂಪ್‌ ಕಾರ್ಯಾಲಯವನ್ನು ತಾತ್ಕಾಲಿಕ ಹೈಕೋರ್ಟ್‌ ಆಗಿ ಪರಿವರ್ತಿಸಿದೆ. 

ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಜಸ್ಟಿಸ್‌ ಎನ್‌ ವಿ ರಮಣ ಅವರು ಮುಖ್ಯಮಂತ್ರಿ ನಾಯ್ಡು ಮತ್ತು ಇತರ ಗಣ್ಯರ ಉಪಸ್ಥಿತಿಯಲ್ಲಿ ತಾತ್ಕಾಲಿಕ ಹೈಕೋರ್ಟ್‌ ಆವರಣವನ್ನು ಉದ್ಘಾಟಿಸಿದರು. 

ತಾತ್ಕಾಲಿಕ ಹೈಕೋರ್ಟ್‌ ಕಟ್ಟಡ ಜನವರಿ ಅಂತ್ಯದೊಳಗೆ ಸಿದ್ಧವಾಗುವ ನಿರೀಕ್ಷೆ ಇದೆ. ಆದರೆ ನಿಜವಾದ ಹೈಕೋರ್ಟ್‌ ಸಂಕೀರ್ಣ ಮೂರು ವರ್ಷಗಳ ಒಳಗೆ ನಿರ್ಮಾಣವಾಗಲಿದೆ.

ಟಾಪ್ ನ್ಯೂಸ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.