ಆಂಧ್ರದಲ್ಲಿ ಟಿಡಿಪಿ-ವೈಎಸ್ಆರ್ಸಿ ಮಾರಾಮಾರಿ : 1 ಬಲಿ, ನಾಲ್ವರಿಗೆ ಗಾಯ
Team Udayavani, Jun 1, 2019, 4:54 PM IST
ಅಮರಾವತಿ: ಅನಂತಪುರ ಜಿಲ್ಲೆಯ ಬಾತಾಲಾಪಲ್ಲಿ ಮಂಡಲದಲ್ಲಿ ಟಿಡಿಪಿ ಮತ್ತು ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಶುಕ್ರವಾರ ಮಾರಾಮಾರಿ ನಡೆದಿದ್ದು, ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಜಕೀಯ ದ್ವೇಷದಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡೆವೆ ಹೊಡೆದಾಟ ನಡೆದಿದ್ದು , ಓರ್ವ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ವಾತಾವಾರಣ ನಿರ್ಮಾಣವಾಗಿದ್ದು ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆಂಧ್ರ ವಿಧಾನಸಭೆಮತ್ತುಲೋಕಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. 175 ವಿಧಾನಸಭಾ ಕ್ಷೇತ್ರಗಳ ಪೈಕಿ 151 ನ್ನು ಗೆದ್ದು ಅಧಿಕಾರಕ್ಕೇರಿತ್ತು. ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 25 ಲೋಕಸಭಾ ಕ್ಷೇತ್ರಗಳ ಪೈಕಿ 22 ರಲ್ಲಿ ಜಯ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ