ಹಾವು ಕಡಿತ ತಡೆಗೆ ಸರ್ಪಪೂಜೆ
Team Udayavani, Aug 28, 2018, 6:00 AM IST
ಅಮರಾವತಿ: ಕೃಷ್ಣಾ ಜಿಲ್ಲೆಯಲ್ಲಿ ಹಾವು ಕಡಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗದೇವನ ಕೋಪ ತಣಿಸಲು ಆಂಧ್ರ ಸರ್ಕಾರ ಬುಧವಾರ ಸರ್ಪಪೂಜೆ ಆಯೋಜಿಸಿದೆ. ಕಳೆದ ಎರಡು ತಿಂಗಳಿನಿಂದೀಚೆಗೆ ಕೃಷ್ಣಾ ಜಿಲ್ಲೆಯಲ್ಲಿ ಹಾವು ಕಡಿತದಿಂದ ಇಬ್ಬರು ಸಾವನ್ನಪ್ಪಿದ್ದರೆ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಸೇರಿದ್ದಾರೆ. ಮೋಪಿದೇವಿಯಲ್ಲಿರುವ ಪ್ರಸಿದ್ಧ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ಸಾಮಾನ್ಯವಾಗಿ ವೈಯಕ್ತಿಕವಾಗಿ ಸರ್ಪಯಾಗ ಜರಗುತ್ತಿರುತ್ತವೆ. ಆದರೆ ಆ.29ರಂದು ಸರ್ಪ ದೋಷ ನಿವಾರಣಾ ಪೂಜೆಯನ್ನು ಸರ್ಕಾರದ ಮುಜರಾಯಿ ಇಲಾಖೆಯೇ ಹಮ್ಮಿಕೊಂಡಿದೆ.
ಮುಜರಾಯಿ ಇಲಾಖೆ ಹಾಗೂ ಕೃಷ್ಣಾ ಜಿಲ್ಲಾ ಆಡಳಿತದ ಅಧೀನದ ಅರ್ಚಕರು ಈ ಪೂಜೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ.ಲಕ್ಷ್ಮೀಕಾಂತಂ ಹೇಳಿದ್ದಾರೆ. ಆದರೆ ಸರ್ಕಾರದ ಈ ಸರ್ಪಪೂಜೆಯ ವಿರುದ್ಧ ಜನ ವಿಜ್ಞಾನ ವೇದಿಕೆಯಂತಹ ಸಂಸ್ಥೆಗಳು ಅಪಸ್ವರ ಎತ್ತಿವೆ. ಇದು ಜನರ ಕಣ್ಣೊರೆಸುವ ತಂತ್ರ, ಇದರಿಂದ ಸಾರ್ವಜನಿಕರ ಹಣ ಪೋಲಾಗಲಿದೆ ಎಂದು ಜನ ವಿಜ್ಞಾನ ವೇದಿಕೆ ಹೇಳಿದೆ.
ಭಾರೀ ಮಳೆಯ ಕಾರಣದಿಂದಾಗಿ ಕೃಷ್ಣಾ ನದಿ ಉಕ್ಕಿ ಹರಿದಿದ್ದು, ಹಾವುಗಳು ರೈತರ ಗದ್ದೆಗಳತ್ತ ಹಾಗೂ ಹಳ್ಳಿಗಳತ್ತ ಬರುತ್ತಿವೆ. ಜಿಲ್ಲೆಯ ದೀವಿಸೀಮಾ ಭಾಗದ ನಾಗಯಲಂಕಾ ಮತ್ತು ಅವನಿಗದ್ದ ಗ್ರಾಮಗಳಲ್ಲಿ ಹಾವುಗಳ ಉಪಟಳ ವಿಪರೀತವಾಗಿದೆ. ಕಳೆದ 10 ದಿನಗಳಿಂದ ಅವನಿಗದ್ದದ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೊಳಗಾಗಿ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ