ತಮಿಳ್ನಾಡಲ್ಲಿ ಪ್ರತಿಭಟನೆ ಕಿಚ್ಚಿಟ್ಟ ಅನಿತಾ ಆತ್ಮಹತ್ಯೆ
Team Udayavani, Sep 3, 2017, 11:15 AM IST
ಚೆನ್ನೈ: ವೈದ್ಯಕೀಯ ಸೀಟಿಗಾಗಿ ನೀಟ್ ಪರೀಕ್ಷೆ ಕಡ್ಡಾಯದ ವಿರುದ್ಧ ಹೋರಾಟಕ್ಕೆ ನಾಂದಿ ಹಾಡಿದ್ದ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಪ್ರಕರಣ ಈಗ ರಾಜಕೀಯವಾಗಿ ಮಹತ್ವ ಪಡೆದುಕೊಳ್ಳುತ್ತಿದೆ. ಶನಿವಾರ ತಮಿಳು ಸಂಘಟನೆಗಳು ಹಾಗೂ ವಿಪಕ್ಷಗಳು ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಿಳಿದಿವೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ತೀವ್ರ ಆಕ್ರೋಶ ವ್ಯಕ್ತಗೊಂಡಿದೆ.
ನೀಟ್ ಪರೀಕ್ಷೆಯಿಂದ ತಮಿಳುನಾಡಿಗೆ ವಿನಾಯ್ತಿ ನೀಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಅನಿತಾ ತೀರ್ಪು ತನ್ನ ಪರವಾಗಿ ಬಂದಿಲ್ಲ ಎನ್ನುವ ಕಾರಣಕ್ಕಾಗಿ ಸಾಕಷ್ಟು ನೊಂದಿದ್ದಳು. ವ್ಯವಸ್ಥೆಯ ಬಗ್ಗೆಯೂ ಆಕ್ರೋಶಗೊಂಡಿದ್ದ ಅನಿತಾ ಅಸಹಾಯಕತೆ ಬಗ್ಗೆ ಡೆತ್ನೋಟ್ನಲ್ಲಿ ಬರೆದಿಟ್ಟು, ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದರು.
ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಕಾರಣವಾದ ನೀಟ್ ಮಾದರಿ ಪರೀಕ್ಷೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಕೆಲ ರಾಜಕೀಯ ಸಂಘಟನೆಗಳು, ತಮಿಳು ಪರ ಸಂಘಟನೆಗಳು, ಸಿಪಿಎಂ, ಎಸ್ಎಫ್ಐ, ಡಿವೈಎಫ್ಐ ಸಂಘಟನೆಗಳು ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಿವೆ. ರಸ್ತೆಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿವೆ. ಕೂಡಲೇ ಕೇಂದ್ರ ಪರೀಕ್ಷಾ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿವೆ. ಸಾಮಾಜಿಕ ಜಾಲತಾಣ ಗಳಲ್ಲಿ ಅನಿತಾ ಸಾವಿನ ಬಗ್ಗೆ ದೇಶಾದ್ಯಂತ ಅನೇಕರು ಆಕ್ರೋಶ ದಿಂದ ಪೋಸ್ಟ್ಗಳನ್ನು ಪ್ರಕಟಿಸಿ ವಿರೋಧ ವ್ಯಕ್ತಪಡಿಸಿದ್ದಾರೆ.
ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸಾಂತ್ವನ ಹೇಳಿ, “”ಅನಿತಾ ಸಾವು ಶಾಕ್ ನೀಡಿದೆ. ಇದೊಂದು ದುರಂತ” ಎಂದು ಟ್ವೀಟ್ ಮಾಡಿದ್ದಾರೆ. ಅಂತೆಯೇ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್ ಕೂಡ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ಸಿಎಂ ಪಳನಿಸ್ವಾಮಿ ಅವರು ಅನಿತಾ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ