7 ಲಕ್ಷ ರೂ.ಚೆಕ್ ವಾಪಸ್ ಕೊಟ್ಟ ಅನಿತಾ ಕುಟುಂಬ
Team Udayavani, Sep 5, 2017, 7:25 AM IST
ಚೆನ್ನೈ: ನೀಟ್ ಪರೀಕ್ಷೆ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ದಲಿತ ವಿದ್ಯಾರ್ಥಿನಿ ಅನಿತಾ ಆತ್ಮಹತ್ಯೆ ಪ್ರಕರಣ ತಮಿಳುನಾಡಿನಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಸೋಮವಾರವೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ನೀಟ್ ರದ್ದು ಮಾಡುವಂತೆ ಆಗ್ರಹಿಸಿವೆ. ಮತ್ತೂಂದು ಬೆಳವಣಿಗೆಯಲ್ಲಿ, ರಾಜ್ಯ ಸರ್ಕಾರವು ಪರಿಹಾರದ ರೂಪದಲ್ಲಿ ನೀಡಿರುವ 7 ಲಕ್ಷ ರೂ.ಗಳ ಚೆಕ್ ಅನ್ನು ಅನಿತಾ ಕುಟುಂಬವು ಸರ್ಕಾರಕ್ಕೇ ವಾಪಸ್ ನೀಡಿದೆ.
ಅರಿಯಲೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಪ್ರಿಯಾ ಅವರು ಸೋಮವಾರ ಅನಿತಾ ಮನೆಗೆ ತೆರಳಿ ಅವಳ ಹೆತ್ತವರಿಗೆ ಪರಿಹಾರ ಚೆಕ್ ವಿತರಿಸಿದರು. ಆದರೆ, ಅದನ್ನು ಮರಳಿಸಿದ ಅನಿತಾ ಸಹೋದರ ಮಣಿರತ್ನಂ, “ಅನಿತಾ ಸತ್ತಿದ್ದು ನೀಟ್ ಪರೀಕ್ಷೆಯಿಂದ ವಿನಾಯ್ತಿ ಬೇಕೆಂದೇ ಹೊರತು, ಸರ್ಕಾರದ ಪರಿಹಾರಕ್ಕಾಗಿ ಅಲ್ಲ,’ ಎಂದು ಆಕ್ರೋಶದಿಂದ ನುಡಿದಿದ್ದಾರೆ.
ಈ ನಡುವೆ, ಪುದುಚೇರಿಯಲ್ಲಿಯೂ ನೀಟ್ ವಿರೋಧಿಸಿ ಸೋಮವಾರ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿ ಭಟನೆ ನಡೆಸಿವೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, “ನಮ್ಮ ಸಹನೆಯನ್ನು ಪರೀಕ್ಷಿಸಬೇಡಿ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ