ಮೋದಿ ಕಾಲದಲ್ಲಿ ಮರಳಿದ ಶಿಲ್ಪ ಸಂಪತ್ತು: ಭಾರತಕ್ಕೆ ಮರಳುತ್ತಿದೆ ಅನ್ನಪೂರ್ಣಾ ದೇವಿ ವಿಗ್ರಹ


Team Udayavani, Nov 30, 2020, 7:19 AM IST

ಮೋದಿ ಕಾಲದಲ್ಲಿ ಮರಳಿದ ಶಿಲ್ಪ ಸಂಪತ್ತು: ಭಾರತಕ್ಕೆ ಮರಳುತ್ತಿದೆ ಅನ್ನಪೂರ್ಣಾ ದೇವಿ ವಿಗ್ರಹ

ಹೊಸದಿಲ್ಲಿ: ಪ್ರಧಾನಿ ಮೋದಿ ರವಿವಾರ ನಡೆಸಿಕೊಟ್ಟ ಮನ್‌ ಕೀ ಬಾತ್‌ ನಲ್ಲಿ ಕೆನಡಾದಲ್ಲಿರುವ ಅನ್ನಪೂರ್ಣಾ ದೇವಿಯ ವಿಗ್ರಹ ಸದ್ಯದಲ್ಲೇ ವಾರಾಣಸಿಗೆ ಮರಳುವ ಸಿಹಿ ಸುದ್ದಿ ನೀಡಿದ್ದಾರೆ. ಶತಮಾನದಷ್ಟು ಹಿಂದೆ ಕಳವಾಗಿದ್ದ ಈ ವಿಗ್ರಹ ವಾಪಸ್‌ ಬರುತ್ತಿರುವುದು ಇಡೀ ದೇಶಕ್ಕೇ ಖುಷಿಯ ವಿಚಾರ ಎಂದಿದ್ದಾರೆ ಮೋದಿ. ಅಷ್ಟೇ ಅಲ್ಲ, ಕಳೆದ ಆರು ವರ್ಷಗಳಲ್ಲಿ ಇಂತಹ ಸುಮಾರು 40 ವಿಗ್ರಹಗಳನ್ನು ವಿದೇಶಗಳಿಂದ ತರಿಸಲಾಗಿದೆ. ಅಮೆರಿಕವೊಂದೇ ಭಾರತದ 200 ಪ್ರಾಚೀನ ವಸ್ತುಗಳನ್ನು ಮರಳಿಸಿದೆ.

ಮೋದಿ ವಿಶೇಷ ಆಸಕ್ತಿ

ಕಳವಾಗಿರುವ ವಿಗ್ರಹಗಳನ್ನು ಮರಳಿ ತರಿಸುವಲ್ಲಿ ಪ್ರಧಾನಿ ಮೋದಿ ವಿಶೇಷ ಆಸಕ್ತಿ ವಹಿಸಿದ್ದಾರೆ. 2014ರಲ್ಲಿ ಪ್ರಧಾನಿಯಾದ ಬಳಿಕ ಆಸ್ಟ್ರೇಲಿಯಾದಿಂದ ಚೋಳರ ಕಾಲದ ನಟ ರಾಜ ಮತ್ತು ಅರ್ಧನಾರೀಶ್ವರ ವಿಗ್ರಹಗಳನ್ನು ವಾಪಸ್‌ ತರಲಾಯಿತು. ಇವೆರಡೂ 10ನೇ ಶತಮಾನದವು. ಸೆಪ್ಟಂಬರ್‌ನಲ್ಲಿ ಮೋದಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ವೇಳೆ ಇವುಗಳನ್ನು ಆಗಿನ ಅಲ್ಲಿನ ಪ್ರಧಾನಿ ವಾಪಸ್‌ ನೀಡಿದ್ದರು.

2015ರಲ್ಲಿ ಕೆನಡಾ ಪ್ರವಾಸಕ್ಕೆ ತೆರಳಿದ್ದ ವೇಳೆ ಖುಜುರಾಹೋದಿಂದ ಕಳವಾಗಿದ್ದ ವಿಗ್ರಹಗಳನ್ನು ವಾಪಸ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ಒಂದು ತಿಂಗಳಿನಲ್ಲಿ ಜರ್ಮನಿಯು ದುರ್ಗಾ ಮಾತೆಯ ಮಹಿಷಮರ್ದಿನಿ ಅವತಾರದ ವಿಗ್ರಹ ವನ್ನು ವಾಪಸ್‌ ಮಾಡಿತ್ತು.

ಇಂಡಿಯಾ ಪ್ರೈಡ್‌ ಶ್ರಮ

ಭಾರತದಿಂದ ಕಳವಾಗಿರುವ ವಿಗ್ರಹಗಳನ್ನು ಹುಡುಕುವಲ್ಲಿ ಇಂಡಿಯಾ ಪ್ರೈಡ್‌ ಎಂಬ ಎನ್‌ಜಿಎ ಸಂಘಟನೆಯ ಶ್ರಮವೂ ಇದೆ. 2014ರಲ್ಲಿ ವಿಜಯಕುಮಾರ್‌ ಮತ್ತು ಅನುರಾಗ್‌ ಸಕ್ಸೇನಾ ಎಂಬವರು ಇದನ್ನು ಸ್ಥಾಪಿಸಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲಿಗರ ಗುಂಪೇ ಇದೆ. ಇವರ ಶ್ರಮದಿಂದ ರಾಮ, ಲಕ್ಷ್ಮಣ ಮತ್ತು ಸೀತೆಯ ವಿಗ್ರಹಗಳು ಇಂಗ್ಲೆಂಡ್‌ನಲ್ಲಿ ಇರುವುದು ಪತ್ತೆಯಾಗಿತ್ತು.

ಮನ್‌ ಕೀ ಬಾತ್‌ ನಲ್ಲಿ ಮೋದಿ ಹೇಳಿದ್ದು

ಭಾನುವಾರ ತಮ್ಮ ಮನ್‌ ಕೀಬಾತ್‌ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅನ್ನ ಪೂರ್ಯಾ ದೇವಿಯ ವಿಗ್ರಹವು ಕೆನಡಾದಿಂದ ವಾಪಸ್‌ ಬರುತ್ತಿರುವ ಮಾಹಿತಿ ನೀಡಿದರು. ಇದನ್ನು 100 ವರ್ಷಗಳ ಹಿಂದೆ ಕಳವು ಮಾಡಲಾಗಿತ್ತು. ಈ ವಿಗ್ರಹ ಮರಳಿಸುತ್ತಿರುವ ಕೆನಡಾ ಸರಕಾರಕ್ಕೆ ಮೋದಿ ಕೃತಜ್ಞತೆ ಸಲ್ಲಿಸಿದರು. 18ನೇ ಶತಮಾನದಲ್ಲಿ ಪೇಶ್ವೆ ಬಾಜೀರಾವ್‌ ಕಾಲದಲ್ಲಿ ನಿರ್ಮಿಸಲಾಗಿದ್ದ ದೇಗುಲದಿಂದ ಈ ವಿಗ್ರಹವನ್ನು ಕಳವು ಮಾಡಲಾಗಿತ್ತು.

ರಾಮ, ಲಕ್ಷ್ಮಣ, ಸೀತೆಯ ಮೂರ್ತಿಗಳು

ಇತ್ತೀಚೆಗಷ್ಟೇ ಇಂಗ್ಲೆಂಡ್ ನಿಂದ ರಾಮ, ಲಕ್ಷ್ಮಣ, ಸೀತೆಯ ವಿಗ್ರಹಗಳನ್ನು ವಾಪಸ್‌ ತರಿಸಲಾಗಿದೆ. ಇವು ವಿಜಯನಗರ ಕಾಲದವು. 1978ರಲ್ಲಿ ತಮಿಳುನಾಡಿನಿಂದ ಇವುಗಳನ್ನು ಕಳವು ಮಾಡಲಾಗಿತ್ತು. ಇಂಗ್ಲೆಂಡ್‌ ಸರಕಾರದ ಜತೆ ಮಾತುಕತೆ ನಡೆಸಿ ವಾಪಸ್‌ ತರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಸಿಂಗ್‌ ಪಟೇಲ್‌ ತಿಳಿಸಿದ್ದಾರೆ. ಮೋದಿ ಅವರ ಆಸ ಕ್ತಿಯಿಂದಾಗಿ ದೇಶದ ಸಾಂಸ್ಕೃ ತಿಕ ಸಂಪ ತ್ತನ್ನು ವಾಪಸ್‌ ತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಈ ವಿಗ್ರಹಗಳನ್ನು ಶನಿವಾರವಷ್ಟೇ ನಾಗಪಟ್ಟಣ ಜಿಲ್ಲೆಯ ಆನಂದಮಂಗಲಂನ ದೇಗುಲದಲ್ಲಿ ಪುನರ್‌ ಪ್ರತಿಷ್ಠಾಪನೆ ನಡೆಸಲಾಗಿದೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.