Meerut; ಕೌನ್ಸಿಲರ್ಗಳ ನಡುವೆ ಮಾರಾಮಾರಿ: ಬಿಜೆಪಿ ಶಾಸಕರಿಗೂ ಥಳಿತ
ಕೌನ್ಸಿಲರ್ಗಳನ್ನು ಪ್ರತ್ಯೇಕಿಸಲು ಪೊಲೀಸರ ಹರಸಾಹಸ : ವಿಡಿಯೋ ವೈರಲ್
Team Udayavani, Dec 30, 2023, 7:42 PM IST
ಮೀರತ್ : ನಗರದ ಮುನ್ಸಿಪಲ್ ಕಾರ್ಪೊರೇಷನ್ ನ ಶನಿವಾರ ನಡೆದ ಸಭೆಯಲ್ಲಿ ಕೌನ್ಸಿಲರ್ಗಳ ನಡುವೆ ಮಾರಾಮಾರಿ ನಡೆದಿದ್ದು, ಶಾಸಕರ ಮೇಲೂ ಹಲ್ಲೆ ನಡೆಸಲಾಗಿದೆ.
ಸಮಾಜವಾದಿ ಪಕ್ಷ, ಬಿಜೆಪಿ ಮತ್ತು ಬಹುಜನ ಸಮಾಜ ಪಕ್ಷದ ಕೌನ್ಸಿಲರ್ಗಳ ನಡುವೆ ಘರ್ಷಣೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಕೌನ್ಸಿಲರ್ ರೇಖಾ ಸಿಂಗ್ ಮನೆ ತೆರಿಗೆ ಕುರಿತು ಹೇಳಿಕೆ ನೀಡಿದ ನಂತರ ಘರ್ಷಣೆ ಆರಂಭವಾಗಿದೆ ಎಂದು ಹೇಳಲಾಗಿದೆ.
ಎಸ್ ಪಿ ಮತ್ತು ಬಿಎಸ್ ಪಿ ಪಕ್ಷಗಳ ಕೌನ್ಸಿಲರ್ಗಳು ಇದನ್ನು ವಿರೋಧಿಸಿ ವಾಗ್ವಾದಕ್ಕಿಳಿದಿದ್ದು ಕೋಲಾಹಲ ಮತ್ತು ತೀವ್ರ ಜಗಳಕ್ಕೆ ಕಾರಣವಾಯಿತು. ಕೌನ್ಸಿಲರ್ಗಳು ಒಬ್ಬರನ್ನೊಬ್ಬರು ಎಳೆದಾಡಿದ ಕಾರಣ ಹೋರಾಟ ಸದನದ ಆಚೆಗೂ ವಿಸ್ತರಿಸಿ ರಸ್ತೆಗೂ ಬಂದಿದೆ.
ಕೌನ್ಸಿಲರ್ಗಳನ್ನು ಸಮಾಧಾನಪಡಿಸಲು ಬಂದ ಬಿಜೆಪಿ ಎಂಎಲ್ಸಿ ಧರ್ಮೇಂದ್ರ ಭಾರದ್ವಾಜ್ ಅವರಿಗೂ ಥಳಿಸಲಾಗಿದೆ. ಹೊಡೆದಾಟದ ವೇಳೆ ತೆಗೆದ ವಿಡಿಯೋಗಳಲ್ಲಿ ಭಾರದ್ವಾಜ್ ಅವರು ಕೌನ್ಸಿಲರ್ಗೆ ಹೊಡೆಯುತ್ತಿರುವುದು ಕಂಡುಬಂದಿದೆ. ಹೊಡೆದಾಟಕ್ಕಿಳಿದಿದ್ದ ಕೌನ್ಸಿಲರ್ಗಳನ್ನು ಪ್ರತ್ಯೇಕಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
At board meeting in Nagar Nigam, Meerut UP. pic.twitter.com/X343Hs5OC3
— Piyush Rai (@Benarasiyaa) December 30, 2023
ಸ್ಥಳಕ್ಕೆ ಆಗಮಿಸಿದ ಮೀರತ್ನ ಬಿಜೆಪಿ ಶಾಸಕ ಸೋಮೇಂದ್ರ ತೋಮರ್, ಹೊಡೆದಾಡಿದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಮೀರತ್ ಮೇಯರ್ ಹರಿಕಾಂತ್ ಅಹ್ಲುವಾಲಿಯಾ ತಿಳಿಸಿದ್ದಾರೆ.
ಶಾಮ್ಲಿ ಪುರಸಭೆಯ ಮಂಡಳಿಯ ಸಭೆಯು ಕೌನ್ಸಿಲ್ನ ಇಬ್ಬರು ಸದಸ್ಯರ ನಡುವೆ ತೀವ್ರ ವಾಗ್ವಾದ ಮತ್ತು ಹೊಡೆದಾಟ ನಡೆದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಘಟನೆಯ ವಿಡಿಯೋವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಹಂಚಿಕೊಂಡು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!