INDIA ಮೈತ್ರಿಕೂಟಕ್ಕೆ ಮತ್ತೊಂದು ಶಾಕ್: ಬಿಹಾರ ವಿಧಾನಸಭೆ ಚುನಾವಣೆಗೆ ಆಪ್ ಸ್ಪರ್ಧೆ
ಕೊಳಕು ರಾಜಕೀಯ ಬಿಹಾರದ ದೌರ್ಭಾಗ್ಯ...
Team Udayavani, Aug 27, 2023, 10:27 PM IST
ಹೊಸದಿಲ್ಲಿ: ಬಿಜೆಪಿ ವಿರುದ್ಧ ಸಮರ ಸಾರಲು ರಚಿಸಲಾದ ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನ ಕುರಿತು ಹಲವು ಪ್ರಶ್ನೆಗಳು ಇನ್ನೂ ಉಳಿದುಕೊಂಡಿದ್ದು ,ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬಿಹಾರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಜನೆಯನ್ನು ಶನಿವಾರ ಪ್ರಕಟಿಸಿದೆ.
ಎಎಪಿ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಎಎಪಿಯ ಬಿಹಾರ ಘಟಕದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಸಂದೀಪ್ ಪಾಠಕ್ ಅವರು ಬಿಹಾರದಲ್ಲಿ ಪಕ್ಷವನ್ನು ಬಲಪಡಿಸುವ ಬಗ್ಗೆ ಒತ್ತಿ ಹೇಳಿ “ಕೊಳಕು ರಾಜಕೀಯದಿಂದಾಗಿ ರಾಜ್ಯವು ಎಲ್ಲಿ ಇರಬೇಕೋ ಅಲ್ಲಿ ಮುನ್ನಡೆಯಲು ಸಾಧ್ಯವಾಗದಿರುವುದು ಬಿಹಾರದ ದೌರ್ಭಾಗ್ಯ, ಬಿಹಾರದಲ್ಲಿ ಎಎಪಿ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲು, ಸಂಘಟನೆ ಪ್ರಬಲವಾಗಿರುವುದು ಅವಶ್ಯಕ” ಎಂದು ಪಾಠಕ್ ಹೇಳಿದರು. ದೆಹಲಿಯ ಎಎಪಿ ಶಾಸಕ ಮತ್ತು ಬಿಹಾರ ಉಸ್ತುವಾರಿ ಅಜೇಶ್ ಯಾದವ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ