ಶ್ರೀನಗರ: ಭದ್ರತಾ ಪಡೆಯ ಎನ್ ಕೌಂಟರ್ ಗೆ ಉಗ್ರ ಸಾವು, ಕಾರ್ಯಾಚರಣೆ ಮುಂದುವರಿಕೆ
ಆತನ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ
Team Udayavani, Mar 15, 2022, 4:29 PM IST
ಶ್ರೀನಗರ್: ಭದ್ರತಾ ಪಡೆಯ ಎನ್ ಕೌಂಟರ್ ಗೆ ಉಗ್ರನೊಬ್ಬ ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ಪ್ರದೇಶದಲ್ಲಿ ಮಂಗಳವಾರ (ಮಾರ್ಚ್ 15) ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ವರದಕ್ಷಿಣೆ ಕಿರುಕುಳದ ಆರೋಪ: 9 ತಿಂಗಳ ಮಗುವನ್ನು ಬಿಟ್ಟು ನೇಣಿಗೆ ಶರಣಾದ ಗೃಹಿಣಿ
ಎನ್ ಕೌಂಟರ್ ಕುರಿತು ಮಾಹಿತಿ ನೀಡಿರುವ ಐಜಿಪಿ ವಿಜಯ್ ಕುಮಾರ್, ಭದ್ರತಾ ಪಡೆ ನಡೆಸುತ್ತಿರುವ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದು, ಆತನ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ ಎಂದು ತಿಳಿಸಿದ್ದಾರೆ.
ಆವಂತಿಪೋರಾ ಗ್ರಾಮವೊಂದರಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಅಡಗಿದ್ದ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡು ಹಾರಿಸಿದಾಗ ಇದಕ್ಕೆ ಪ್ರತಿಯಾಗಿ ನಡೆಸಿದ ಗುಂಡಿನ ದಾಳಿಯಲ್ಲಿ ಉಗ್ರ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಈ ಪ್ರದೇಶದಲ್ಲಿ ಕೆಲವು ಉಗ್ರರು ಅಡಗಿಕೊಂಡಿರುವ ಶಂಕೆ ಇದ್ದು, ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಅರೆಸೇನಾ ಪಡೆ ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿರುವುದಾಗಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ