‘ಅನ್ಸರುಲ್ಲಾ’ ಕೇಸ್: ಎನ್ಐಎ ಕಾರ್ಯಾಚರಣೆ
Team Udayavani, Jul 21, 2019, 5:14 AM IST
ಚೆನ್ನೈ:ಇತ್ತೀಚೆಗೆ ಬೆಳಕಿಗೆ ಬಂದ ಅನ್ಸರುಲ್ಲಾ ಎಂಬ ಉಗ್ರ ಸಂಘಟನೆ ರಚನೆಯ ಸಂಚಿನ ಪ್ರಕರಣದ ಭಾಗವಾಗಿ ಎನ್ಐಎ ಶನಿವಾರ ತಮಿಳುನಾಡಿನ 14 ಕಡೆಗಳಲ್ಲಿ ಶೋಧ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌದಿ ಅರೇಬಿಯಾದಿಂದ ಗಡೀಪಾರಾಗಿ ಭಾರತಕ್ಕೆ ಬಂದ 14 ಜನರ ಮನೆಗಳ ಮೇಲೆ ಈ ದಾಳಿ ನಡೆದಿದೆ.
ರಾಮನಾಥಪುರಂ ಜಿಲ್ಲೆಯಲ್ಲಿ ಐದು ಕಡೆ, ಥೇಣಿ, ಚೆನ್ನೈ, ಮಧುರೈ, ತಿರುನಲ್ವೇಲಿ, ತಂಜಾವೂರು, ಪೆರಂಬಲೂರು, ನಾಗಪಟ್ಟಣಂ ಹಾಗೂ ತಿರುವರೂರಿನ ಒಂದು ಕಡೆಗಳಲ್ಲಿ ಶೋಧ ನಡೆಸಲಾಗಿದೆ. ಶಂಕಿತರು ಐಸಿಸ್, ಅಲ್ ಖೈದಾ ಮತ್ತು ಸಿಮಿ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಶಂಕಿತರನ್ನು ಎನ್ಐಎ ಬಂಧಿಸಿದೆ. ಇವರಿಗೆ ಶ್ರೀಲಂಕಾ ಸ್ಫೋಟದ ಸಂಚುಕೋರರೊಂದಿಗೆ ಸಂಪರ್ಕವಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಲ್ಯಾಪ್ಟಾಪ್, ಏಳು ಮೊಬೈಲ್ ಫೊನ್ಗಳು, ಐದು ಸಿಮ್ ಕಾರ್ಡ್ಗಳು, ಮೂರು ಮೆಮೊರಿ ಕಾರ್ಡ್, ಒಂದು ಹಾರ್ಡ್ ಡಿಸ್ಕ್, ಎರಡು ಪೆನ್ ಡ್ರೈವ್ಗಳು, ಡಿವಿಡಿಗಳು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ