ಡಿಆರ್ಡಿಒ ಅಭಿವೃದ್ಧಿಪಡಿಸಿದ ಔಷಧ ತುರ್ತು ಸಂದರ್ಭದಲ್ಲಿ ಬಳಕೆಗೆ ಅನುಮತಿ
Team Udayavani, May 8, 2021, 9:06 PM IST
ನವದೆಹಲಿ: ‘ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (ಡಿಆರ್ಡಿಒ) ಕೋವಿಡ್ ತಡೆಗೆ ಅಭಿವೃದ್ಧಿಪಡಿಸಿದ ಔಷಧವನ್ನು ತುರ್ತು ಸಂದರ್ಭದಲ್ಲಿ ಸಹಾಯಕ ಚಿಕಿತ್ಸೆಯ ರೂಪದಲ್ಲಿ ಬಳಸಲು ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಅನುಮತಿ ನೀಡಿದ್ದಾರೆ’ ಎಂದು ರಕ್ಷಣಾ ಸಚಿವಾಲಯವು ಶನಿವಾರ ತಿಳಿಸಿದೆ.
2–ಡಯಾಕ್ಸಿ–ಡಿ–ಗ್ಲೂಕೋಸ್ (2–ಡಿಜಿ) ಎಂಬ ಬಾಯಿಯಿಂದ ಸೇವಿಸಬಹುದಾದ ಈ ಔಷಧವು ಕೋವಿಡ್ಗೆ ಒಳಗಾಗಿ ಆಸ್ಪತ್ರೆಗೆ ಸೇರಿದ ರೋಗಿಗಳು ಶೀಘ್ರವಾಗಿ ಗುಣಮುಖರಾಗಲು ನೆರವಾಗುತ್ತದೆ. ಅಲ್ಲದೆ, ಆಮ್ಲಜನಕದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಸಣ್ಣ ಪೊಟ್ಟಣಗಳಲ್ಲಿ ಪುಡಿಯ ರೂಪದಲ್ಲಿ ಬರುವ ಈ ಔಷಧವನ್ನು ನೀರಿನಲ್ಲಿ ಮಿಶ್ರಣ ಮಾಡಿ ಸೇವಿಸಬಹುದು. ಈ ಔಷಧವು ಸೋಂಕಿತ ಕೋಶಗಳ ಮೇಲೆ ಕಾರ್ಯಾಚರಣೆ ಮಾಡುವುದರಿಂದ ಅಮೂಲ್ಯ ಜೀವಗಳನ್ನು ಉಳಿಸಲು ಇದು ನೆರವಾಗಲಿದೆ ಎಂದು ಪ್ರಯೋಗಗಳಿಂದ ದೃಢಪಟ್ಟಿದೆ ಸಚಿವಾಲಯ ಹೇಳಿದೆ.
2–ಡಿಜಿ ಔಷಧವನ್ನು ಹೈದರಾಬಾದ್ನ ಡಾ. ರೆಡ್ಡೀಸ್ ಲ್ಯಾಬ್ನ ಸಹಯೋಗದಲ್ಲಿ ಡಿಆರ್ಡಿಒದ ಇನ್ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಅಂಡ್ ಅಲೈಡ್ ಸೈನ್ಸಸ್ (ಐಎನ್ಎಂಎಎಸ್) ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಔಷಧವು ದೇಹವನ್ನು ಸೇರಿದ ಬಳಿಕ ಸೋಂಕಿತ ಜೀವಕೋಶಗಳ ಮೇಲೆ ಸಂಗ್ರಹಗೊಂಡು, ಅಲ್ಲಿ ವೈರಸ್ ಅಭಿವೃದ್ಧಿಹೊಂದುವುದನ್ನು ತಡೆಯುತ್ತದೆ. 2–ಡಿಜಿ ಔಷಧದ ಸಹಾಯದಿಂದ ಚಿಕಿತ್ಸೆ ಪಡೆದ ರೋಗಿಗಳು ಇತರ ರೋಗಿಗಳಿಗಿಂತ ಶೀಘ್ರದಲ್ಲಿ ಗುಣಮುಖರಾಗಿರುವುದು ಕಂಡುಬಂದಿದೆ ಎಂದು ಸಚಿವಾಲಯ ತಿಳಿಸಿದೆ.
ಈ ಔಷಧವನ್ನು ಸುಲಭವಾಗಿ ತಯಾರಿಸಿ ಎಲ್ಲರಿಗೂ ಪೂರೈಸಬಹುದಾಗಿದೆ. ಸಾಮಾನ್ಯದಿಂದ ಗಂಭೀರ ಸ್ವರೂಪದ ಕೋವಿಡ್ ರೋಗಿಗಳ ಮೇಲೆ ಈ ಔಷಧವನ್ನು ತುರ್ತು ಸಂದರ್ಭದಲ್ಲಿ ಸಹಾಯಕ ಚಿಕಿತ್ಸೆಯ ರೂಪದಲ್ಲಿ (ಪ್ರಾಥಮಿಕ ಚಿಕಿತ್ಸೆಯ ಜತೆಯಲ್ಲೇ, ಅದಕ್ಕೆ ಪೂರಕವಾಗುವಂತೆ ಇನ್ನೊಂದು ಚಿಕಿತ್ಸೆ ನೀಡುವುದನ್ನು ಸಹಾಯಕ ಚಿಕಿತ್ಸೆ ಎನ್ನಲಾಗುತ್ತದೆ) ಬಳಸಲು ಮೇ 1ರಂದು ಡಿಸಿಜಿಐ ಅನುಮತಿ ನೀಡಿತ್ತು ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ