ಸಿಖ್‌ ವಿರೋಧಿ ದಂಗೆ: ಸಜ್ಜನ್‌ಗೆ ಜೀವಾವಧಿ


Team Udayavani, Dec 18, 2018, 6:00 AM IST

pti12172018000002a.jpg

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಸಜ್ಜನ್‌ ಕುಮಾರ್‌ಗೆ ದೆಹಲಿ ಹೈಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಮೂವತ್ನಾಲ್ಕು ವರ್ಷಗಳ ಬಳಿಕ ಸಂತ್ರಸ್ತರಿಗೆ ನ್ಯಾಯ ಸಿಕ್ಕಿದೆ. ಅಷ್ಟೇ ಅಲ್ಲ, ಇಡೀ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ರಾಜಕಾರಣಿಯೊಬ್ಬರು ಶಿಕ್ಷೆಗೆ ಗುರಿಯಾಗಿದ್ದು, ಕಾಂಗ್ರೆಸ್‌ಗೆ ತೀವ್ರ ಮುಜುಗರ ಉಂಟು ಮಾಡಿದೆ.

ದೆಹಲಿ ಹೈಕೋರ್ಟ್‌ನ ಈ ತೀರ್ಪು ಮಧ್ಯಪ್ರದೇಶದಲ್ಲಿ ನಡೆದ ಕಮಲ್‌ನಾಥ್‌ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಮೇಲೂ ಮಂಕು ಕವಿಸಿತು. ಈ ಪ್ರಕರಣದ ತನಿಖೆ ನಡೆಸಿದ್ದ ನಾನಾವತಿ ಆಯೋಗದ ವರದಿಯಲ್ಲಿ ಕಮಲ್‌ನಾಥ್‌ ಅವರ ಹೆಸರೂ ಉಲ್ಲೇಖವಾಗಿರುವುದರಿಂದ ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ ನಾಯಕರು, ಕಮಲ್‌ನಾಥ್‌ ಅವರನ್ನು ಹೇಗೆ ಸಿಎಂ ಮಾಡುತ್ತೀರಿ ಎಂದು ಪ್ರಶ್ನೆಗಳ ಸುರಿಮಳೆಗೈದರು. ಇನ್ನೊಂದೆಡೆ, ಪಂಜಾಬ್‌ ಸಿಎಂ ಅಮರೀಂದರ್‌ ಸಿಂಗ್‌ ಅವರು ಈ ತೀರ್ಪನ್ನು ಸ್ವಾಗತಿಸಿದ್ದಾರೆ.

ದೆಹಲಿಯ ಪಾಲಂ ಕಾಲೋನಿಯ ರಾಜನಗರ ಪಾರ್ಟ್‌ 1 ಪ್ರದೇಶದ ಐವರು ಸಿಖVರು ಮತ್ತು ಗುರುದ್ವಾರವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಈ ಶಿಕ್ಷೆ ನೀಡಲಾಗಿದೆ. ಸಜ್ಜನ್‌ ಜತೆಗೆ ಇನ್ನೂ ಐವರ ಶಿಕ್ಷೆಯನ್ನೂ ಹೈಕೋರ್ಟ್‌ ಖಚಿತಪಡಿಸಿದೆ. ಡಿ.31ರೊಳಗೆ ಅಪರಾಧಿಗಳೆಲ್ಲರೂ ಶರಣಾಗಬೇಕು ಎಂದೂ ಸೂಚಿಸಿದೆ.

ಈ ಮಧ್ಯೆ, ತೀರ್ಪು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಸಜ್ಜನ್‌ಕುಮಾರ್‌ ಪರ ವಕೀಲರು ಹೇಳಿದ್ದಾರೆ. 31ರ ವರೆಗೆ ಕಾಲಾವಕಾಶವಿದ್ದು, ಅಷ್ಟರಲ್ಲಿ ಸುಪ್ರೀಂ ಕದ ಬಡಿಯುತ್ತೇವೆ ಎಂದಿದ್ದಾರೆ.

ಕೋರ್ಟ್‌ ಹೇಳಿದ್ದೇನು?: ಈ ಜೀವಾವಧಿ ತೀರ್ಪು ಸಜ್ಜನ್‌ಕುಮಾರ್‌ ಅವರ “ಹಿಂದಿನ ಸಾಮಾನ್ಯ ಜೀವನವನ್ನು ನೆನಪಿಸಿಕೊಳ್ಳುವ ಶಿಕ್ಷೆ’ ಎಂದು ಹೈಕೋರ್ಟ್‌ ಹೇಳಿತು. ಜತೆಗೆ ಇಡೀ ಸಿಖ್‌ ವಿರೋಧಿ ದಂಗೆಯು “ರಾಜಕೀಯ ಕೃಪಾಕಟಾಕ್ಷದ ಅಮಲಿನಲ್ಲಿ ಮಾನವತೆಯ ಮೇಲೆ ನಡೆಸಿದ ದೌರ್ಜನ್ಯ’ ಎಂದು ಬಣ್ಣಿಸಿತು. ಅಪರಾಧಿಗಳಿಗೆ ಶಿಕ್ಷಿಸಲು ಮೂರು ದಶಕ ತೆಗೆದುಕೊಂಡರೂ, ಸಂತ್ರಸ್ತರ ಪಾಲಿಗೆ ಇದೊಂದು “ನಿರಾಕರಿಸಲಾಗದ’ ನ್ಯಾಯವಾಗಿದೆ ಎಂದ ನ್ಯಾಯಾಲಯ, “”ಸತ್ಯ ಎಂದಿಗೂ ಮೇಲುಗೈ ಸಾಧಿಸುತ್ತದೆ ಮತ್ತು ನ್ಯಾಯ ಸಿಕ್ಕೇ ಸಿಗುತ್ತದೆ” ಎಂದು ಅಭಿಪ್ರಾಯಪಟ್ಟಿತು.

ಈ ತೀರ್ಪು ಸ್ವಲ್ಪ ಮಟ್ಟಿನ ಸಮಾಧಾನ ತಂದಿದೆ. ಇಲ್ಲಿವರೆಗೆ ನಾವು ಅನುಭವಿಸಿದ ಅನ್ಯಾಯವನ್ನು ಬೇರೆ ಯಾರೂ ಅನುಭವಿಸಿರಲು ಸಾಧ್ಯವಿಲ್ಲ.
– ಜಗದೀಶ್‌ ಕೌರ್‌, ಹೋರಾಟಗಾರ್ತಿ

ಘಟನೆಗೆ ಕಾರಣರಾದ ಅಪರಾಧಿಗಳು ರಾಜಕೀಯ ಆಶ್ರಯ ಪಡೆದಿದ್ದರಿಂದ ಸಂತ್ರಸ್ತರು ತಮಗೆ ನ್ಯಾಯ ಸಿಗುವ ಅವಕಾಶವೇ ಇಲ್ಲ ಎಂದು ಭಾವಿಸಿದ್ದರು.
– ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.