ದೇಶದ ವಿರೋಧಿ ಚಟುವಟಿಕೆ ಆರೋಪ: ಆಂಧ್ರಪ್ರದೇಶದ ಹಲವೆಡೆ ಎನ್ ಐಎ ದಾಳಿ
Team Udayavani, Sep 18, 2022, 1:47 PM IST
ನೆಲ್ಲೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಕೆಲವರು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.
ಆಂಧ್ರ ಪ್ರದೇಶದ ಕರ್ನೂಲ್, ನೆಲ್ಲೂರ್, ನಂದ್ಯಾಲ್ ಮತ್ತು ತೆಲಂಗಾಣದ ನಿಜಾಮಾಬಾದ್ ನಲ್ಲಿ ಎನ್ಐಎ ದಾಳಿ ಮಾಡಿದೆ.
ಕಳೆದ ತಿಂಗಳು, ಎನ್ ಐಎ ಹೈದರಾಬಾದ್ನಲ್ಲಿ 27 ಜನರ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಲು ಸಂಚು ರೂಪಿಸಿದ್ದಾರೆಂದು ಕೇಸು ದಾಖಲಿಸಿತ್ತು.
ಇದನ್ನೂ ಓದಿ:ಸಿಎಂ ಬೊಮ್ಮಾಯಿ ಭೇಟಿಯಾದ ಪಿಣರಾಯಿ ವಿಜಯನ್: ಗಡಿ ರಸ್ತೆಗಳ ಕುರಿತು ಚರ್ಚೆ
ನಿಜಾಮಾಬಾದ್ ನಲ್ಲಿರುವ ಅಬ್ದುಲ್ ಖಾದರ್ ಅವರ ಮನೆಯನ್ನು ಪಿಎಫ್ಐ ಸದಸ್ಯರು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ಇತರ 26 ಜನರ ವಿರುದ್ಧವೂ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಅಬ್ದುಲ್ ಖಾದರ್ ಅವರು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಹೆಚ್ಚುವರಿ ಭಾಗವನ್ನು ಪಿಎಫ್ಐ ಸದಸ್ಯರು ತಮ್ಮ ಸಭೆಗಳು ಮತ್ತು ತರಬೇತಿಗಳಿಗೆ ಬಳಸಲು ಸುಮಾರು ಆರು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ್ದಾರೆ.
ಪಿಎಫ್ಐ ಸದಸ್ಯರು ಕರಾಟೆ ತರಗತಿಗಳ ಹೆಸರಿನಲ್ಲಿ ಯುವಕರಿಗೆ ತರಬೇತಿ ಮತ್ತು ದೈಹಿಕ ವ್ಯಾಯಾಮಗಳನ್ನು ಪ್ರಾರಂಭಿಸಿದ್ದರು. ಅವರ ದ್ವೇಷಪೂರಿತ ಭಾಷಣಗಳ ಮೂಲಕ ನಿರ್ದಿಷ್ಟ ಸಮುದಾಯದ ವಿರುದ್ಧ ಯುವಕರನ್ನು ಪ್ರಚೋದಿಸುತ್ತಿದ್ದರು ಎಂದು ಎಫ್ಐಆರ್ ನಲ್ಲಿ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್