ಶೇ.29 ಮಂದಿಯಲ್ಲಿ  ಪ್ರತಿಕಾಯ ಸೃಷ್ಟಿ; ಆ.1-7ರವರೆಗೆ ನಡೆಸಲಾದ ಸೀರೋ ಸರ್ವೇಯಲ್ಲಿ ಬಹಿರಂಗ


Team Udayavani, Aug 21, 2020, 6:19 AM IST

ಶೇ.29 ಮಂದಿಯಲ್ಲಿ  ಪ್ರತಿಕಾಯ ಸೃಷ್ಟಿ; ಆ.1-7ರವರೆಗೆ ನಡೆಸಲಾದ ಸೀರೋ ಸರ್ವೇಯಲ್ಲಿ ಬಹಿರಂಗ

ಕೋಲ್ಕತಾದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಗುರುವಾರ ವಾಹನ ಸವಾರರೊಬ್ಬರಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸುತ್ತಿರುವುದು.

ಹೊಸದಿಲ್ಲಿ: ದಿಲ್ಲಿಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವಂತೆಯೇ, ಪ್ರಸಕ್ತ ತಿಂಗಳ ಆರಂಭದಲ್ಲಿ ನಡೆಸಿದ ಸೀರೋ ಸರ್ವೇಯಲ್ಲಿ ದಿಲ್ಲಿಯ ಶೇ.29.1ರಷ್ಟು ಮಂದಿಯ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

ಈ ವಿಚಾರವನ್ನು ಗುರುವಾರ ದಿಲ್ಲಿಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ತಿಳಿಸಿದ್ದಾರೆ. ಆ.1ರಿಂದ 7ರವರೆಗೆ 11 ಜಿಲ್ಲೆಗಳ 15 ಸಾವಿರ ಮಂದಿಯ ಸ್ಯಾಂಪಲ್‌ಗ‌ಳನ್ನು ಸಂಗ್ರಹಿಸಿ, ಪರೀಕ್ಷೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಸೆ.1ರಿಂದ ಮುಂದಿನ ಹಂತದ ಸಮೀಕ್ಷೆ ನಡೆಸಲಿದ್ದೇವೆ ಎಂದು ಜೈನ್‌ ತಿಳಿಸಿದ್ದಾರೆ.

ಈ ಹಿಂದೆ ನಡೆಸಿದ ಸೀರೋ ಸರ್ವೇಯಲ್ಲಿ ದಿಲ್ಲಿಯ ಶೇ.22ರಷ್ಟು ಮಂದಿಗೆ ಈಗಾಗಲೇ ಸೋಂಕು ತಗುಲಿದ್ದು, ಅವರ ದೇಹದಲ್ಲಿ ಪ್ರತಿಕಾಯ ಸೃಷ್ಟಿಯಾಗಿ ಕೊರೊನಾದಿಂದ ಗುಣ ಮುಖರಾಗಿದ್ದಾರೆ ಎಂಬ ವಿಚಾರ ತಿಳಿದು ಬಂದಿತ್ತು. ವಿಶೇಷ ವೆಂದರೆ, ಪ್ರತಿಕಾಯ ಸೃಷ್ಟಿಯಾಗಿರುವವರ ಪೈಕಿ ಶೇ.28.3ರಷ್ಟು ಪುರುಷರಾದರೆ, ಶೇ.32.2ರಷ್ಟು ಮಹಿಳೆ ಯರು ಎಂಬ ಅಂಶ ಸರ್ವೇ ಯಿಂದ ಬಹಿರಂಗವಾಗಿದೆ.

ಇದೇ ವೇಳೆ, ಪ್ರತಿಕಾಯ ಸೃಷ್ಟಿಯಾಗಿದೆ ಎಂಬ ಮಾತ್ರಕ್ಕೆ ಜನರು ನಿರ್ಲಕ್ಷ್ಯ ವಹಿಸು ವಂತಿಲ್ಲ. ಯಾಕೆಂದರೆ, ಇದು ಸೃಷ್ಟಿಯಾಗಿ ರುವುದು ಶೇ.29ರಷ್ಟು ಮಂದಿಗೆ ಮಾತ್ರ. ಅಂದರೆ ಶೇ.71ರಷ್ಟು ಜನರಿಗೆ ಇನ್ನಷ್ಟೇ ಸೋಂಕು ತಗಲುವ ಸಾಧ್ಯತೆಯಿದೆ ಎಂದೂ ಜೈನ್‌ ಹೇಳಿದ್ದಾರೆ.

ದಾಖಲೆ: ಇದೇ ಮೊದಲ ಬಾರಿಗೆ ದೇಶದಲ್ಲಿ ಒಂದು ದಿನದ ಸೋಂಕು ಪ್ರಕರಣಗಳ ಸಂಖ್ಯೆ 70 ಸಾವಿರದ ಸನಿಹಕ್ಕೆ ಬಂದಿದೆ. ಬುಧವಾರ ಬೆಳಗ್ಗೆ 8ರಿಂದ ಗುರುವಾರ ಬೆಳಗ್ಗೆ 8ರವರೆಗಿನ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 69,652 ಮಂದಿಗೆ ಸೋಂಕು ದೃಢಪಟ್ಟು, 977 ಮಂದಿ ಮೃತಪಟ್ಟಿ ದ್ದಾರೆ. ಇದೇ ವೇಳೆ, ಗುಣಮುಖ ಪ್ರಮಾಣ ಶೇ.73.91ಕ್ಕೇರಿದೆ ಎಂದು ಕೇಂದ್ರ ಸರಕಾರ‌ ತಿಳಿಸಿದೆ.

ಸೋಂಕಿನ ಅಂತ್ಯಕ್ಕೆ ದಿನಗಣನೆ?
ಹಲವು ತಿಂಗಳುಗಳಿಂದಲೂ ಕೋವಿಡ್ ಎಂಬ ಮಹಾಮಾರಿಯ ದಾಳಿಯಿಂದ ನಲುಗಿಹೋಗಿರುವ ಭಾರತವು ಸಮಾಧಾನದ ನಿಟ್ಟುಸಿರು ಬಿಡುವ ದಿನ ಸಮೀಪಿಸಿದೆಯೇ? ಟೈಮ್ಸ್‌ ಫ್ಯಾಕ್ಟ್- ಇಂಡಿಯಾ ಔಟ್‌ಬ್ರೇಕ್‌ ವರದಿ ಪ್ರಕಾರ, ಭಾರತದಲ್ಲಿ ಸೋಂಕು ಉತ್ತುಂಗಕ್ಕೇರಲು ಇನ್ನು 2 ವಾರಗಳಷ್ಟೇ ಬಾಕಿಯಿದೆ. ಅಂದರೆ, ಸೋಂಕು ಉತ್ತುಂಗದ ಮಟ್ಟಕ್ಕೇರಿ, ಅನಂತರ ಕ್ರಮೇಣ ಇಳಿಕೆಯಾಗುತ್ತಾ ಬರಲಿದೆ. ಸೆ.2ರ ವೇಳೆಗೆ 7.87 ಲಕ್ಷ ಸಕ್ರಿಯ ಪ್ರಕರಣಗಳೊಂದಿಗೆ ಸೋಂಕು ಉತ್ತುಂಗಕ್ಕೇರಲಿದೆ. ಡಿ.3ರ ವೇಳೆಗೆ ಸೋಂಕಿನ ವ್ಯಾಪಿಸುವಿಕೆಗೆ ಪೂರ್ಣವಿರಾಮ ಬೀಳುವ ನಿರೀಕ್ಷೆಯಿದೆ ಎಂದು ಈ ವರದಿ ಹೇಳಿದೆ.

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.