ವಿಚಾರಣೆ ಪೂರ್ತಿಗೊಳ್ಳುವವರೆಗೆ ಇರಲಿ ನಿರೀಕ್ಷಣಾ ಜಾಮೀನು
Team Udayavani, Jan 30, 2020, 8:36 AM IST
ಹೊಸದಿಲ್ಲಿ: ನಿರ್ದಿಷ್ಟ ಅವಧಿಗೆ ಮಾತ್ರ ನಿರೀಕ್ಷಣಾ ಜಾಮೀನು ಇರುವುದರ ಬದಲು, ವಿಚಾರಣೆ ಪ್ರಕ್ರಿಯೆ ಮುಕ್ತಾಯದ ವರೆಗೆ ಈ ವ್ಯವಸ್ಥೆ ಇರುವಂತಾಗಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.
ನ್ಯಾ| ಅರುಣ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿ, ಕೆಲವು ವಿಶೇಷ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನಿನ ಅವಧಿ ಸಾಮಾನ್ಯವಾಗಿ ಕೊನೆಗೊಳ್ಳುವುದಿಲ್ಲ. ಆರೋಪಿ ವ್ಯಕ್ತಿಯು ಕೋರ್ಟ್ನಿಂದ ಸಮನ್ಸ್ ಪಡೆದಾಗ ಅಥವಾ ವ್ಯಕ್ತಿಯ ಮೇಲೆ ಆರೋಪ ಬಂದಾಗ, ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಳ್ಳುವವರೆಗೂ ನಿರೀಕ್ಷಣಾ ಜಾಮೀನು ಅವಧಿ ಮುಂದುವರಿಯಲಿದೆ ಎಂದು ಅಭಿಪ್ರಾಯಪಟ್ಟಿದೆ.
ವಿಶೇಷ, ವಿಭಿನ್ನ ಸಂದರ್ಭ ಅಗತ್ಯವಿದ್ದರೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅವಧಿಯನ್ನು ನಿಗದಿಪಡಿಸಲಿದೆ ಎಂದು ನ್ಯಾಯಪೀಠ ಪ್ರತಿಪಾದಿಸಿದೆ. ಈ ಪ್ರಕರಣದಲ್ಲಿ ನ್ಯಾ| ಎಸ್. ರವೀಂದ್ರ ಭಟ್, ನ್ಯಾ| ಎಂ.ಆರ್. ಶಾ ಪ್ರತ್ಯೇಕವಾಗಿ ತೀರ್ಪು ಬರೆದಿದ್ದಾರೆ. ಇದರ ಜತೆಗೆ ದೇಶದ ಕೋರ್ಟ್ಗಳಲ್ಲಿ ಯಾವ ರೀತಿಯಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದರ ಬಗ್ಗೆಯೂ ನ್ಯಾಯಪೀಠ ನಿರ್ದೇಶನಗಳನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು