Ministerial Dialogue: ದೆಹಲಿಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್
Team Udayavani, Nov 10, 2023, 9:00 AM IST
ನವದೆಹಲಿ: ಐದನೇ ಭಾರತ-ಯುಎಸ್ 2+2 ಸಚಿವರ ಸಂವಾದದಲ್ಲಿ ಭಾಗವಹಿಸಲು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕನ್ ಶುಕ್ರವಾರ ಬೆಳಗ್ಗೆ ದೆಹಲಿಗೆ ಆಗಮಿಸಿದರು.
ಶುಕ್ರವಾರ 2+2 ಸಂವಾದ ನಡೆಯಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಗುರುವಾರ ದೆಹಲಿಗೆ ಆಗಮಿಸಿದ್ದು, ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸ್ವಾಗತಿಸಿದರು.
ಅಮೆರಿಕದ ಉನ್ನತ ರಾಜತಾಂತ್ರಿಕರನ್ನು ಸ್ವಾಗತಿಸಿದ ವಿದೇಶಾಂಗ ಸಚಿವಾಲಯ, “ಈ ಭೇಟಿಯು ಭಾರತ-ಯುಎಸ್ ಸಂಬಂಧಗಳಿಗೆ ಮತ್ತಷ್ಟು ಉತ್ತೇಜನ ನೀಡುತ್ತದೆ” ಎಂದು ಹೇಳಿದೆ.
ಈ ಕುರಿತು ಟ್ವಿಟರ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ‘ಭಾರತ ಹಾಗೂ ಅಮೆರಿಕ ನಡುವೆ ಸಚಿವರ 2+2 ಮಾತುಕತೆಗೆ ದೆಹಲಿಗೆ ಬಂದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್ ಅವರಿಗೆ ಸ್ವಾಗತ’ ಎಂದು ಪೋಸ್ಟ್ ಮಾಡಿದ್ದಾರೆ.
2+2 ಸಂವಾದವು ವೇಗವಾಗಿ ವಿಸ್ತರಿಸುತ್ತಿರುವ ಭಾರತ-ಯುಎಸ್ ಕಾರ್ಯತಂತ್ರದ ಸಂಬಂಧಗಳ ಸಮಗ್ರ ವಿಮರ್ಶೆಯನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಜೊತೆಗೆ ರಕ್ಷಣೆ ಮತ್ತು ಭದ್ರತಾ ಸಹಕಾರ, ಇಂಡೋ-ಪೆಸಿಫಿಕ್ ಕಾರ್ಯತಂತ್ರಗಳು, ಜನರಿಂದ ಜನರ ನಡುವಿನ ಸಂಬಂಧಗಳು ಒಳಗೊಂಡಂತೆ ಹಲವಾರು ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ಹೇಳಿದ್ದಾರೆ.
A warm welcome to US Secretary of State @SecBlinken as he arrives in New Delhi to co-chair the 5th 🇮🇳-🇺🇸 2+2 Ministerial Dialogue.
The visit will give further boost to 🇮🇳-🇺🇸 Comprehensive Global Strategic Partnership! pic.twitter.com/8zY3qCIeF6
— Arindam Bagchi (@MEAIndia) November 9, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್