ಅಂತರಿಕ್ಷ-ದೇವಾಸ್ ಒಪ್ಪಂದ ದೇಶಕ್ಕೇ ಮೋಸ; ಸಚಿವೆ ನಿರ್ಮಲಾ ಸೀತಾರಾಮನ್
ಕರಾರು ರದ್ದು ಸುಪ್ರೀಂ ತೀರ್ಪಿಗೆ ಕೇಂದ್ರದ ಸ್ವಾಗತ
Team Udayavani, Jan 19, 2022, 7:15 AM IST
ನವದೆಹಲಿ: ಇಸ್ರೋದ ವಾಣಿಜ್ಯ ವಿಭಾಗ ಅಂತರಿಕ್ಷ ಮತ್ತು ದೇವಾಸ್ ಮಲ್ಟಿ ಮೀಡಿಯಾ ನಡುವಿನ ಒಪ್ಪಂದ ರದ್ದು ಮಾಡಿದ ಸುಪ್ರೀಂಕೋರ್ಟ್ ಸ್ವಾಗತಾರ್ಹ ಎಂದು ಕೇಂದ್ರ ಸರ್ಕಾರ ಹೇಳಿದೆ.
ಈ ಒಪ್ಪಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ಇದು ದೇಶಕ್ಕೆ ಮಾಡಿದ ಮೋಸ ಎಂಬ ಬಗ್ಗೆ ಸ್ಪಷ್ಟ ಸಾಕ್ಷಿ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ಮಾತನಾಡಿದ ಅವರು, 2005ರಲ್ಲಿ ನಡೆದಿದ್ದ ಒಪ್ಪಂದ ರದ್ದು ಮಾಡಿದ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಬಳಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇವಾಸ್, ಭಾರತ ಸರ್ಕಾರದ ವಿರುದ್ಧ ಹೂಡಿರುವ ಎಲ್ಲಾ ದಾವೆಗಳನ್ನು ಎದುರಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇದನ್ನೂ ಓದಿ:ಶುಕ್ರವಾರ ಕರ್ಫ್ಯೂ ಭವಿಷ್ಯ, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆ : ಸಿಎಂ ಸೂಚನೆ
ಅಂತರಿಕ್ಷ-ದೇವಾಸ್ ನಡುವಿನ ಒಪ್ಪಂದವು, “ಭಾರತದ ರಕ್ಷಣಾ ಪಡೆಗಳು ಮಾತ್ರವೇ ಬಳಸಬಹುದಾಗಿದ್ದ ಎನ್-ಬ್ಯಾಂಡ್ ಉಪಗ್ರಹ ತರಂಗ ಗುತ್ಛವನ್ನು ಅಂದಿನ ಕೇಂದ್ರ ಸರ್ಕಾರ, ಖಾಸಗಿ ಕಂಪನಿಗೆ (ದೇವಾಸ್) ಅತ್ಯಲ್ಪ ಬೆಲೆಗೆ ಮಾರಾಟ ಮಾಡಿತ್ತು. ಇದು ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಮಾಡಿಕೊಂಡ ಮೋಸದ ಒಪ್ಪಂದ ಎಂಬುದರಲ್ಲಿ ಎರಡು ಮಾತಿಲ್ಲ.
ಸುಪ್ರೀಂ ಕೋರ್ಟ್ ಕೂಡ ಇದನ್ನೇ ಹೇಳಿದೆ. ಈ ಹಿನ್ನೆಲೆಯಲ್ಲಿ ದೇವಾಸ್ ಮಲ್ಟಿಮೀಡಿಯಾಕ್ಕೆ ಸಂಬಂಧಿಸಿದ ಎಲ್ಲಾ ಸ್ಥಿರಾಸ್ತಿ- ಚರಾಸ್ತಿಗಳನ್ನು ಜಪ್ತಿ ಮಾಡಲು ಕೇಂದ್ರ ಸರ್ಕಾರಕ್ಕೆ ಕಾನೂನಾತ್ಮಕ ಬಲ ಬಂದಂತಾಗಿದೆ” ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು