ನೋಟ್ಬ್ಯಾನ್ಗೆ ಬೆಂಬಲ:ತಡವಾಗಿ ಕ್ಷಮೆ ಯಾಚಿಸಿದ ಕಮಲ್!
Team Udayavani, Oct 18, 2017, 12:59 PM IST
ಚೆನ್ನೈ : ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿರುವ ಕಮಲ್ ಹಾಸನ್ ಅವರು ಅಚ್ಚರಿಯ ಯೂ ಟರ್ನ್ ನಲ್ಲಿ ಈ ಹಿಂದೆ ನೋಟ್ ಬ್ಯಾನ್ ಕ್ರಮವನ್ನು ಬೆಂಬಲಿಸಿದ್ದಕ್ಕೆ ತಡವಾಗಿ ಜನತೆಯ ಕ್ಷಮೆ ಯಾಚಿಸಿದ್ದಾರೆ…!
ತಮಿಳು ನಿಯತಕಾಲಿಕೆ ವಿಕಟನ್ಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಸರ್ಕಾರದ ಅಪನಗದೀಕರಣದ ನಿರ್ಧಾರವನ್ನು ತರಾತುರಿಯಲ್ಲಿ ಬೆಂಬಲಿಸಿದ್ದಕ್ಕಾಗಿ ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ.
‘ಕಪ್ಪು ಹಣ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂಬ ಕಾರಣಕ್ಕೆ ನಾನು ಅಪನಗದೀಕರಣಕ್ಕೆ ಬೆಂಬಲ ನೀಡಿದ್ದೆ . ಆದರೆ ನನ್ನ ನಿರ್ಧಾರಕ್ಕೆ ಅರ್ಥಶಾಸ್ತ್ರ ತಿಳಿದವರು ಟೀಕೆಗಳನ್ನು ಮಾಡಿದ್ದರು. ಆ ಬಳಿಕ ನಾನು ಯೋಜನೆ ಒಳ್ಳೆಯದೆ ಆದರೂ ಕಾರ್ಯಗತಗೊಳಿಸುವಲ್ಲಿ ಸಮಸ್ಯೆಗಳಿರುವ ಬಗ್ಗೆ ಹೇಳಿದ್ದೆ’ ಎಂದಿದ್ದಾರೆ.
ಇದೇ ವೇಳೆ ಮೋದಿಗೆ ಟಾಂಗ್ ನೀಡಿರುವ ಕಮಲ್ ‘ಒಬ್ಬ ಒಳ್ಳೆಯ ನಾಯಕ ಎನಿಸಿಕೊಂಡವನು ತನ್ನ ತಪ್ಪನ್ನು ಒಪ್ಪಿಕೊಳ್ಳಲು ಸಿದ್ದನಿರಬೇಕು. ಪ್ರಧಾನಿ ತನ್ನ ತಪ್ಪನ್ನು ಯಾವುದೇ ಹಿಂಜರಿಕೆಯಿಲ್ಲದೆ ಒಪ್ಪಿಕೊಂಡರೆ ಅವರಿಗೆ ನನ್ನದು ಇನ್ನೊಂದು ಸಲಾಂ.ಗಾಂಧಿ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಸ್ವಭಾವ ಹೊಂದಿದ್ದರು, ಅದು ಇಂದಿಗೂ ಸಾಧ್ಯವಿದೆ’ ಎಂದಿದ್ದಾರೆ.
ಕಳೆದ ವರ್ಷ ನವೆಂಬರ್ 8 ರಂದು 500 ರೂ ಮತ್ತು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿ ಪ್ರಧಾನಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದರು. ಈ ವೇಳೆ ಕಮಲಹಾಸನ್ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ