ಆಪ್ ಮುಖಂಡ ತಾಹೀರ್ ಹುಸೇನ್ ಅಮಾನತು: ಆರೋಪ ಸಾಬೀತಾದರೆ ದುಪ್ಪಟ್ಟು ಶಿಕ್ಷೆ: ಕೇಜ್ರಿವಾಲ್
Team Udayavani, Feb 28, 2020, 8:00 AM IST
ನವದೆಹಲಿ: ಆಪ್ ಮುಖಂಡ, ಪಾಲಿಕೆ ಸದಸ್ಯ ತಾಹೀರ್ ಹುಸೇನ್ ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾತನತುಗೊಳಿಸಲಾಗಿದೆ. ಹುಸೇನ್ ಅವರು ತಮ್ಮ ವಿರುದ್ಧದ ಆರೋಪಗಳಿಂದ ಮುಕ್ತರಾಗುವವರೆಗೂ ಅವರನ್ನು ಅಮಾನತು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ ಎಂದು ವರದಿಯಾಗಿದೆ.
ದೆಹಲಿ ಹಿಂಸಾಚಾರಕ್ಕೆ ಬಲಿಯಾದ ಗುಪ್ತಚರ ದಳದ ಅಧಿಕಾರಿ ಅಂಕಿತ್ ಶರ್ಮಾ ಮೇಲೆ ಹಲ್ಲೆ ನಡೆಸಿದ್ದು ಆಮ್ ಆದ್ಮಿ ಪಕ್ಷದ ನಾಯಕರು ಎಂದು ಅವರ ತಂದೆ ರೋಹಿತ್ ಶರ್ಮಾ ಆರೋಪಿಸಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ ಆಪ್ ಕೌನ್ಸಿಲರ್ ತಾಹೀರ್ ಹುಸೇನ್ ಮನೆ ಮೇಲಿನ ಟೆರೇಸ್ ನಲ್ಲಿ ಪೆಟ್ರೋಲ್ ಬಾಂಬ್ ಹಾಗೂ ಕಲ್ಲುಗಳು ಪತ್ತೆಯಾಗಿದ್ದವು. ಆದ್ದರಿಂದ ಹುಸೇನ್ ಮೇಲೆ ದಯಾಳ್ ಪುರ ಪೊಲೀಸ್ ಠಾಣೆಯಲ್ಲಿ 302 ಸೆಕ್ಷನ್ ನಡಿ ಎಫ್ ಐ ಆರ್ ದಾಖಾಲಾಗಿತ್ತು. ಮಾತ್ರವಲ್ಲದೆ ಖಜೂರಿ ಖಾಸ್ ಪ್ರದೇಶದಲ್ಲಿರುವ ಅವರ ಕಾರ್ಖಾನೆಗೆ ಬೀಗ ಜಡಿಯಲಾಗಿತ್ತು.
“ಅಂಕಿತ್ ಶರ್ಮಾ ಅವರ ತಂದೆಯ ದೂರಿನ ಮೇರೆಗೆ ನಾವು ಕೊಲೆ ಮತ್ತು ಅಪಹರಣ ಪ್ರಕರಣವನ್ನು ದಾಖಲಿಸಿದ್ದೇವೆ. ಎಫ್ ಐ ಆರ್ನಲ್ಲಿ ಹುಸೇನ್ ಅವರನ್ನು ಶರ್ಮಾ ಅವರ ತಂದೆ ಹೆಸರಿಸಿದ್ದಾರೆ. ಈ ಪ್ರಕರಣವನ್ನು ದಯಾಳ್ ಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ”ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ ತಾಹೀರ್ ಹುಸೇನ್, ಗಲಭೆಯಲ್ಲಿ ತಮಗೂ ತೊಂದರೆಯಾಗಿದೆ. ನಮ್ಮ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಲವಂತವಾಗಿ ನನ್ನನ್ನು ಹೊರ ಹಾಕಿದ್ದರು ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ತಾಹಿರ್ ಹುಸೇನ್ ತಪ್ಪಿತಸ್ಥರೆಂದು ಸಾಬೀತಾದರೆ, ಅವರಿಗೆ ಎರಡು ಪಟ್ಟು ಶಿಕ್ಷೆ ನೀಡಬೇಕು. ಮಾತ್ರವಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಯಾವುದೇ ರಾಜಕೀಯ ಇರಬಾರದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ