ಬೋಪಯ್ಯ ನೇಮಕ ಪ್ರಶ್ನಿಸಿದ್ದ ಅರ್ಜಿ ತಿರಸ್ಕಾರ


Team Udayavani, May 20, 2018, 6:55 AM IST

supreme-court660020913075.jpg

ನವೆದಹಲಿ: ಕರ್ನಾಟಕ ವಿಧಾನಸಭೆಯ ಹಂಗಾಮಿ ಸ್ಪೀಕರ್‌ ಆಗಿ ಶಾಸಕ ಕೆ.ಜಿ.ಬೋಪಯ್ಯ ನೇಮಕ ಪ್ರಶ್ನಿಸಿ ಕಾಂಗ್ರೆಸ್‌-ಜೆಡಿಎಸ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶನಿವಾರ ತಿರಸ್ಕರಿಸಿತು.

ಜತೆಗೆ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಯನ್ನು ನೇರ ಪ್ರಸಾರ ಮಾಡುವಂತೆಯೂ ನ್ಯಾ.ಎ.ಕೆ.ಸಿಕ್ರಿ ನೇತೃತ್ವದ ನ್ಯಾಯಪೀಠ ಆದೇಶ ನೀಡಿತು.

“ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನೇರ ಪ್ರಸಾರ ಮಾಡುವ ವ್ಯವಸ್ಥೆ ಅತ್ಯುತ್ತಮವಾದದು. ಇದರಿಂದ ಪಾರದರ್ಶಕ ವ್ಯವಸ್ಥೆ ಕಾಯ್ದು ಕೊಳ್ಳಬಹುದು’ ಎಂದು ನ್ಯಾ.ಎ.ಕೆ.ಸಿಕ್ರಿ, ನ್ಯಾ.ಎಸ್‌. ಬೋಬ್ಡೆ ನ್ಯಾ. ಅಶೋಕ್‌ ಭೂಷಣ್‌ ಅವರ ನ್ನೊಳಗೊಂಡ ಪೀಠ ಹೇಳಿತು. ಇದಕ್ಕಿಂತ ಹೆಚ್ಚಿಗೆ ನಿಮಗೇನು ಬೇಕು ಎಂದು ನ್ಯಾಯವಾದಿಗಳಾದ ಅಭಿಷೇಕ್‌ ಮನು ಸಿಂಘ್ವಿ ಮತ್ತು ಕಪಿಲ್‌ ಸಿಬಲ್‌ರನ್ನು ನ್ಯಾಯ ಪೀಠ ಪ್ರಶ್ನಿಸಿತು. ಸ್ಥಳೀಯವಾಹಿನಿಗಳು ಪ್ರಕ್ರಿಯೆಯ ನೇರ ಪ್ರಸಾರ ನೀಡಲಿವೆ ಎಂದು ಹೇಳಿತು.

ನಿಲುವಲ್ಲಿ ಬದಲು: 34 ನಿಮಿಷ ನಡೆದ ವಾದ-ಪ್ರತಿವಾದದ ವೇಳೆ ಸಿಬಲ್‌-ಸಿಂಘ್ವಿ ಜೋಡಿ ಹಂಗಾಮಿ ಸ್ಪೀಕರ್‌ರನ್ನು ಬದಲಾಯಿಸಲೇಬೇಕೆಂಬ ಅಂಶಕ್ಕೆ ಒತ್ತು ನೀಡಲಿಲ್ಲ. ರಾಜ್ಯಪಾಲರ ಪರ ವಾದಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಆರಂಭದಲ್ಲಿಯೇ ಪ್ರಕ್ರಿಯೆಯ ನೇರ ಪ್ರಸಾರಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದರು. ಬಳಿಕ ಸಿಬಲ್‌- ಸಿಂಘ್ವಿ ಹಂಗಾಮಿ ಸ್ಪೀಕರ್‌ ಬದಲಾಯಿಸಬೇಕು ಎಂಬ ಮೂಲ ಉದ್ದೇಶದಲ್ಲಿ ಮಾರ್ಪಾಡು ಮಾಡಿಕೊಂಡರು.

ನೂತನ ಶಾಸಕರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಮಾತ್ರ ಬೋಪಯ್ಯ ಹಂಗಾಮಿ ಸ್ಪೀಕರ್‌ ಆಗಲಿ. ಏಕೆಂದರೆ ರಾಜ್ಯಪಾಲರ ಆದೇಶದಲ್ಲಿ ವಿಶ್ವಾಸ ಮತ ಪ್ರಕ್ರಿಯೆಯ ಪ್ರಸ್ತಾಪ ಇಲ್ಲ ಎಂದರು ಸಿಬಲ್‌. ಆಗ ಮಧ್ಯಪ್ರವೇಶಿಸಿದ ನ್ಯಾ.ಸಿಕ್ರಿ, “ಹಾಗಿದ್ದರೆ ವಿಶ್ವಾಸ ಮತ ಪ್ರಕಿಯೆ ಯಾರು ನಡೆಸಿಕೊಡಬೇಕು’? ಎಂದು ಪ್ರಶ್ನಿಸಿದರು. ಅದಕ್ಕಾಗಿ ಹಿರಿಯ ಶಾಸಕರನ್ನು ನೇಮಕ ಮಾಡಬೇಕು. ಕಾಮನ್ವೆಲ್ತ್‌ ರಾಷ್ಟ್ರಗಳಲ್ಲಿ ಈ ಶಿಷ್ಟಾಚಾರ ಇದೆ ಎಂದರು ಸಿಬಲ್‌. ಶಿಷ್ಟಾಚಾರ ಕಾನೂನು ಆಗಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ರಾಜ್ಯಪಾಲರಿಗೆ ಹಿರಿಯ ಶಾಸಕರನ್ನು ನೇಮಕ ಮಾಡಿ ಎಂದು ಆದೇಶ ನೀಡಲು ಸಾಧ್ಯವಿಲ್ಲ ಎಂದರು ನ್ಯಾ.ಸಿಕ್ರಿ.

ಮತ ವಿಭಜನೆ ಮೂಲಕ ಎಣಿಕೆ ಮಾಡಬೇಕು ಎಂದು ಸಿಬಲ್‌ ಕೇಳಿಕೊಂಡಾಗ ಯಡಿಯೂರಪ್ಪ ಪರ ವಾದಿಸಿದ ಮಾಜಿ ಅಟಾರ್ನಿ ಜನರಲ್‌ ಮುಕುಲ್‌ ರೋಹಟಗಿ,”ಪ್ರತಿಯೊಂದು ವಿಚಾರಕ್ಕೂ ಅರ್ಜಿ ಸಲ್ಲಿಸಿದರೆ ಹೇಗೆ? ಸುಪ್ರೀಂ ಕೋರ್ಟ್‌ ಅವರಿಗಾಗಿಯೇ ಕಾಯುತ್ತದೆಯೇ? ಎಂದು ಕೇಳಿದರು. 

ತೀರ್ಪಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ನ್ಯಾಯವಾದಿಗಳಾ ಸಿಬಲ್‌, ಸಿಂ Ì, “ಹಂಗಾಮಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಅವರನ್ನು ಬದಲಿಸಬೇಕೆಂದು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ. ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯ ಬೇಕು ಎನ್ನುವುದೇ ನಮ್ಮ ಆದ್ಯತೆಯಾಗಿತ್ತು ಎಂದಿದ್ದಾರೆ. 

ರಜೆ ಕಳೆಯಲು ಬಿಡಿ: ನ್ಯಾ..ಸಿಕ್ರಿ
“ಇನ್ನು ನಮಗೆ ಬೇಸಿಗೆ ರಜೆಯನ್ನು ಆರಾಮವಾಗಿ ಕಳೆಯಲು ಬಿಡಿ’. ತೀರ್ಪು ನೀಡಿದ ಬಳಿಕ ನ್ಯಾ.ಎ.ಕೆ.ಸಿಕ್ರಿ ತಿಳಿ ಹಾಸ್ಯದ ಧಾಟಿಯಲ್ಲಿ ಹೀಗೆಂದರು. ಅವರ ಮಾತಿಗೆ ಕೋರ್ಟ್‌ನಲ್ಲಿ ಎಲ್ಲರೂ ಗೊಳ್ಳನೆ ನಕ್ಕರು.ವಾದ ಮಂಡನೆ ಆರಂಭವಾದಾಗ ನ್ಯಾಯಪೀಠದ ಕ್ಷಮೆ ಯಾಚಿಸಿದ ಸಿಬಲ್‌, “ಶನಿವಾರ ರಜೆಯ ದಿನವಾಗಿದ್ದರೂ ನ್ಯಾಯಪೀಠಕ್ಕೆ ತೊಂದರೆ ಕೊಡಬೇಕಾದ ಪರಿಸ್ಥಿತಿ ಉಂಟಾಯಿತು’ ಎಂದರು. ಅದಕ್ಕೆ ನ್ಯಾ.ಎ.ಕೆ.ಸಿಕ್ರಿ “ನಾವು ನಮ್ಮ ಸಂವಿಧಾನಾತ್ಮಕ ಕರ್ತವ್ಯ ಮಾಡಬೇಕಲ್ಲವೇ?’ ಎಂದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.