ಮೊದಲು ಹಿಂದೂಗಳಿಗೆ ‘ಏಕರೂಪ ನಾಗರಿಕ ಸಂಹಿತೆ’ ಅನ್ವಯಿಸಿ: ಮೋದಿ ಹೇಳಿಕೆಗೆ ಡಿಎಂಕೆ ತಿರುಗೇಟು
Team Udayavani, Jun 28, 2023, 1:08 PM IST
ಚೆನ್ನೈ: ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಖಂಡಿಸಿರುವ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಇದನ್ನು ಮೊದಲು ಹಿಂದೂಗಳಿಗೆ ಅನ್ವಯಿಸಬೇಕು ಎಂದು ಹೇಳಿದೆ.
ಇದನ್ನು ಮೊದಲು ಹಿಂದೂ ಧರ್ಮಕ್ಕೆ ಜಾರಿಗೊಳಿಸಬೇಕು ಎಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಹೇಳಿದ್ದಾರೆ.
“ಏಕರೂಪ ನಾಗರಿಕ ಸಂಹಿತೆಯನ್ನು ಮೊದಲು ಹಿಂದೂ ಧರ್ಮದಲ್ಲಿ ಪರಿಚಯಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೆ ದೇಶದ ಯಾವುದೇ ದೇವಾಲಯದಲ್ಲಿ ಪೂಜೆ ಮಾಡಲು ಅವಕಾಶ ನೀಡಬೇಕು” ಎಂದು ಇಳಂಗೋವನ್ ಹೇಳಿದರು.
ಇದನ್ನೂ ಓದಿ:ಸುದೀಪ್ ಸೋದರಳಿಯನ ಗ್ರ್ಯಾಂಡ್ ಎಂಟ್ರಿ
“ಸಂವಿಧಾನವು ಪ್ರತಿಯೊಂದು ಧರ್ಮಕ್ಕೂ ರಕ್ಷಣೆ ನೀಡಿರುವುದರಿಂದ ನಮಗೆ ಯುಸಿಸಿ ಬೇಡ” ಎಂದು ಇಳಂಗೋವನ್ ಹೇಳಿದ್ದಾರೆ.
ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಮತ್ತು ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಭಾಗವಾಗಿದೆ ಎಂದು ಪ್ರಧಾನಿ ಮೋದಿ ಮಂಗಳವಾರ ಮಧ್ಯಪ್ರದೇಶದಲ್ಲಿ ಹೇಳಿದ್ದರು.
“ಇಂದು ಜನರನ್ನು ಯುಸಿಸಿ ಹೆಸರಿನಲ್ಲಿ ಪ್ರಚೋದಿಸಲಾಗುತ್ತಿದೆ. ದೇಶವು ಎರಡು ಕಾನೂನು ಮೇಲೆ ಹೇಗೆ ನಡೆಯುತ್ತದೆ? ಸಂವಿಧಾನವು ಸಮಾನ ಹಕ್ಕುಗಳ ಬಗ್ಗೆ ಮಾತನಾಡುತ್ತದೆ. ಯುಸಿಸಿ ಜಾರಿಗೆ ತರಲು ಸುಪ್ರೀಂ ಕೋರ್ಟ್ನಲ್ಲೂ ಕೇಳಿದೆ. ಈ ವಿರೋಧ ಮಾಡುವ ಜನರು ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ