ರಾಜ್ಯ ಗಡಿ ವಿವಾದಕ್ಕೆ “ಮಹಾ’ ವಕೀಲರ ನೇಮಕ
Team Udayavani, Mar 3, 2019, 12:30 AM IST
ಮುಂಬೈ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಉನ್ನತ ಅಧಿಕಾರಿಗಳ ಸಮಿತಿಯ ಸಭೆ ನಡೆಸಿದ್ದು, ವಿವಿಧ ಕಾನೂನು ವಿಚಾರಗಳ ಚರ್ಚೆ ನಡೆಸಿದ್ದಾರೆ. ಅಲ್ಲದೆ ಈ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಮಹಾರಾಷ್ಟ್ರ ಪ್ರತಿನಿಧಿಸಲು ಹೆಚ್ಚುವರಿ ಹಿರಿಯ ವಕೀಲರನ್ನು ನೇಮಿಸಿದ್ದಾರೆ.
ಸದ್ಯ ಮಹಾರಾಷ್ಟ್ರದ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದಿಸುತ್ತಿದ್ದಾರೆ. ಹೆಚ್ಚುವರಿ ವಕೀಲರನ್ನು ನೇಮಿಸಿದ ನಂತರ ದೆಹಲಿಯಲ್ಲಿ ವಕೀಲರು ಸಭೆ ನಡೆಸಿ, ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮದ ಕುರಿತು ಚರ್ಚಿಸಲಿದ್ದಾರೆ.
ಇನ್ನೊಂದೆಡೆ, ವಿವಾದಿತ ನಿರ್ಧಾರವನ್ನೂ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ಗಡಿ ಭಾಗದ 865 ಗ್ರಾಮಗಳಲ್ಲಿ ವಾಸಿಸುತ್ತಿರುವವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠ ಕೋಟಾ ನೀಡುವ ಕುರಿತೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ಭಾಗದಲ್ಲಿರುವ ಸಮುದಾಯಗಳಿಗೆ ಶೇ.16 ಮರಾಠ ಕೋಟ ಲಭ್ಯವಾಗಲಿದೆ. ಮರಾಠಿ ಮಾತನಾಡುವ ನಾಗರಿಕರು ವಾಸಿಸುತ್ತಿರುವ ಬೆಳಗಾವಿ, ಕಾರವಾರ ಹಾಗೂ ನಿಪ್ಪಾಣಿ ಜಿಲ್ಲೆಯ ಗ್ರಾಮಗಳನ್ನೂ ಸೇರಿಸಿ 865 ಗ್ರಾಮಗಳು ಎಂದು ಮಹಾರಾಷ್ಟ್ರ ಈ ಹಿಂದೆಯೇ ಪಟ್ಟಿ ಮಾಡಿದೆ. ಸಭೆಯಲ್ಲಿ ಕಂದಾಯ ಸಚಿವ ಚಂದ್ರಕಾಂತ ಪಾಟೀಲ, ಉದ್ಯಮ ಸಚಿವ ಸುಭಾಷ್ ದೇಸಾಯಿ ಮತ್ತು ವಿಪಕ್ಷ ನಾಯಕ ಧನಂಜಯ್ ಮುಂಡೆ ಕೂಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ