CJI ಇಲ್ಲದೆ ಚುನಾವಣ ಆಯುಕ್ತರ ನೇಮಕ: ಕೇಂದ್ರ ಸರಕಾರ ಸಮರ್ಥನೆ
Team Udayavani, Mar 21, 2024, 1:09 AM IST
ಹೊಸದಿಲ್ಲಿ: ಚುನಾವಣ ಆಯುಕ್ತರ ನೇಮಕ ಸಮಿತಿಯಿಂದ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಟ್ಟಿರುವ ತನ್ನ ನಿರ್ಧಾರವನ್ನು ಕೇಂದ್ರ ಸರಕಾರವು ಸಮರ್ಥಿಸಿಕೊಂಡಿದೆ. ಈ ಕುರಿತು ಸುಪ್ರೀಂ ಕೋರ್ಟ್ಗೆ ಅಫಿದವಿತ್ ಸಲ್ಲಿಸಿರುವ ಸರಕಾರವು, “ಆಯ್ಕೆ ಸಮಿತಿಯಲ್ಲಿ ನ್ಯಾಯಾಂಗ ಸದಸ್ಯರಿರುವ ಕಾರಣಕ್ಕೇ ಸ್ವತಂತ್ರ ಚುನಾವಣ ಆಯೋಗ ಸೃಷ್ಟಿಯಾಗಲಿದೆ ಎಂದೇನೂ ಇಲ್ಲ’ ಎಂದು ಹೇಳಿದೆ.
ಚುನಾವಣ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ ಕಾನೂನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗೆ ಮೊದಲೇ ತುರಾತುರಿಯಲ್ಲಿ ಖಾಲಿ ಇರುವ 2 ಚುನಾವಣ ಆಯುಕ್ತರ ಹುದ್ದೆಗೆ ನೇಮಕಾತಿ ಮಾಡಲಾಗಿದೆ ಎಂಬ ಅರ್ಜಿದಾರರ ವಾದವನ್ನು ಸರಕಾರ ತಳ್ಳಿ ಹಾಕಿದೆ.
ಆಯುಕ್ತರ ನೇಮಕಕ್ಕೆ ಸಂಬಂಧಿ ಸಿದಂತೆ ಸಂಭಾವ್ಯ ಪಟ್ಟಿಯನ್ನು ವಿಪಕ್ಷ ನಾಯಕರಿಗೆ ಸಲ್ಲಿಕೆಯಾಗಿಲ್ಲ ಎಂಬ ವಾದವನ್ನು ತಳ್ಳಿ ಹಾಕಿರುವ ಕೇಂದ್ರವು, ಶೋಧ ಸಮಿತಿ ಅಂತಿಮಗೊಳಿಸಿ 6 ಮಂದಿ ಸಂಭಾವ್ಯರ ಪಟ್ಟಿಯನ್ನು ಮಾ.13ರಂದೇ ನೀಡಲಾಗಿತ್ತು ಎಂದು ಕೇಂದ್ರ ಸರಕಾರವು ತನ್ನ ಅಫಿದವಿತ್ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ