264 ಕೋಟಿ ರೂ. ವೆಚ್ಚ, 8 ವರ್ಷದಲ್ಲಿ ನಿರ್ಮಾಣಗೊಂಡ ಸೇತುವೆ 29 ದಿನದಲ್ಲೇ ಕೊಚ್ಚಿ ಹೋಯ್ತು!
ಸೇತುವೆ ಗಾಗಿ ನಿತೀಶ್ ಕುಮಾರ್ 2012ರ ಏಪ್ರಿಲ್ 5ರಂದು ಶಂಕುಸ್ಥಾಪನೆ ಮೂಲಕ ಯೋಜನೆಗೆ ಚಾಲನೆ ನೀಡಿದ್ದರು.
Team Udayavani, Jul 16, 2020, 7:15 PM IST
ಬಿಹಾರ:ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಎಂಟು ವರ್ಷಗಳ ಕಾಲ ದೀರ್ಘ ಸಮಯದಲ್ಲಿ ನಿರ್ಮಿಸಿದ್ದ ಸೇತುವೆ ಉದ್ಘಾಟನೆಗೊಂಡ 29 ದಿನದೊಳಗೆ ಕೊಚ್ಚಿಕೊಂಡು ಹೋದ ಘಟನೆ ಬಿಹಾರದಲ್ಲಿ ನಡೆದಿದೆ.
ಕಳೆದ ತಿಂಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ಗೋಪಾಲ್ ಗಂಜ್ ನಲ್ಲಿ ನಿರ್ಮಾಣಗೊಂಡಿದ್ದ ಈ ಸೇತುವೆಯನ್ನು ಉದ್ಘಾಟಿಸಿದ್ದರು. ಇದೊಂದು ಮಹತ್ತರವಾದ ಯೋಜನೆಯಾಗಿತ್ತು. ಈ ಸೇತುವೆ ಬಿಹಾರದ ಎರಡು ಪ್ರಮುಖ ಜಿಲ್ಲೆಗಳನ್ನು ಸಂಪರ್ಕಿಸುವ ಕೊಂಡಿಯಾಗಿತ್ತು ಎಂದು ವರದಿ ತಿಳಿಸಿದೆ. ಆದರೆ ಭಾರೀ ಮಳೆಯಿಂದಾಗಿ ಗಂಡಕ್ ನದಿ ತುಂಬಿ ಹರಿದ ಪರಿಣಾಮ ಸೇತುವೆ ಕೊಚ್ಚಿಕೊಂಡು ಹೋಗಿದೆ. ಈ ಬಗ್ಗೆ ವಿಪಕ್ಷಗಳು ತೀವ್ರ ಆಕ್ರೋಶ ಪಡಿಸಿವೆ.
ಗಂಡಕ್ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ನೂತನ ಸೇತುವೆ ಕೊಚ್ಚಿಹೋದ ನಂತರ ವಿಪಕ್ಷಗಳು ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿವೆ. ಸೇತುವೆ ನಿರ್ಮಿಸಲು ಈ ಭಾಗದ ಜನರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು, ಕೊನೆಗೂ ಸುಮಾರು 8 ವರ್ಷಗಳ ನಂತರ ಪೂರ್ಣಗೊಂಡಿದ್ದ ಸೇತುವೆಯನ್ನು ಕಳೆದ ತಿಂಗಳಷ್ಟೇ ನಿತೀಶ್ ಉದ್ಘಾಟಿಸಿದ್ದರು.
ಸತ್ತಾರ್ ಘಾಟ್ ಸೇತುವೆ ಗಾಗಿ ನಿತೀಶ್ ಕುಮಾರ್ 2012ರ ಏಪ್ರಿಲ್ 5ರಂದು ಶಂಕುಸ್ಥಾಪನೆ ಮೂಲಕ ಯೋಜನೆಗೆ ಚಾಲನೆ ನೀಡಿದ್ದರು. 1.44 ಕಿಲೋ ಮೀಟರ್ ಉದ್ದದ ಸೇತುವೆಗೆ 263.47 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಈ ಸೇತುವೆಯಿಂದಾಗಿ ಗೋಪಾಲ್ ಗಂಝ್, ಸರಣ್ ಮತ್ತು ಪೂರ್ವ ಚಂಪಾರಣ್ ಜಿಲ್ಲೆಗಳ ನಡುವಿನ ದೂರವನ್ನು ಕಡಿಮೆಗೊಳಿಸುವುದು ಇದರ ಉದ್ದೇಶವಾಗಿತ್ತು.
ಆದರೆ ಕಳಪೆ ಕಾಮಗಾರಿಯಿಂದ 29 ದಿನಗಳಲ್ಲಿಯೇ ಸೇತುವೆ ಕೊಚ್ಚಿಹೋಗಿರುವುದಕ್ಕೆ ವಿರೋಧ ಪಕ್ಷದ ತೇಜಸ್ವಿ ಯಾದವ್, ಬಿಹಾರ್ ಕಾಂಗ್ರೆಸ್ ಪಕ್ಷದ ಮುಖಂಡ ಮದನ್ ಮೋಹನ್ ಝಾ ಎನ್ ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?