ನೋಟಿಂದ ಬರುತ್ತಾ ಕಾಯಿಲೆ?
Team Udayavani, Sep 3, 2018, 12:57 PM IST
ನವದೆಹಲಿ: ನೋಟುಗಳಿಂದ ಮಾರಣಾಂತಿಕ ಕಾಯಿಲೆಗಳು ಹರಡುತ್ತಿವೆಯೇ ಎಂದು ತನಿಖೆ ನಡೆಸಬೇಕು ಎಂದು ವಿತ್ತ ಸಚಿವ ಅರುಣ್ ಜೇಟ್ಲಿಗೆ ವ್ಯಾಪಾರಿಗಳ ಮಂಡಳಿ ಸಿಎಐಟಿ ಸೂಚಿಸಿದೆ. ಮಾರಣಾಂತಿಕ ಕಾಯಿಲೆ ಹರಡ ದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಗಳನ್ನು ಕೈಗೊಳ್ಳಬೇಕು ಎಂದೂ ಮಂಡಳಿ ಆಗ್ರಹಿಸಿದೆ.
ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಹಾಗೂ ಅಧ್ಯಯನ ವರದಿಗಳನ್ನು ಸಿಎಐಟಿ ಉಲ್ಲೇಖೀಸಿದ್ದು, ಮೂತ್ರ ಹಾಗೂ ಶ್ವಾಸಕೋಶ ಸೋಂಕುಗಳು, ಚರ್ಮ ಸೋಂಕು ಗಳು ಹಾಗೂ ಇತರ ಸಾಂಕ್ರಾಮಿಕ ರೋಗಗಳನ್ನು ಹರಡುವ ಬಗ್ಗೆ ಈ ಹಿಂದೆ ವರದಿಯಾಗಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಸಚಿವಾಲಯ ತೆಗೆದು ಕೊಳ್ಳಬೇಕು ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಪ್ರತಿ ವರ್ಷ ಈ ರೀತಿಯ ವರದಿ ಗಳು ಪ್ರಕಟವಾಗುತ್ತಲೇ ಇದ್ದರೂ, ಈವರೆಗೂ ಯಾವ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಂಡಿಲ್ಲ ಎಂದು ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ