ನೀವಿನ್ನೂ ಕನ್ಯೆಯಾ ? ಮಹಿಳಾ ಉದ್ಯೋಗಿಗಳಿಗೆ IGIMS ನಿರ್ಲಜ್ಜ ಪ್ರಶ್ನೆ


Team Udayavani, Aug 2, 2017, 5:53 PM IST

IGIMS FORM-700.jpg

ಪಟ್ನಾ : ಅತ್ಯಂತ ವಿಚಿತ್ರ ಎನ್ನಬಹುದಾದ ಪ್ರಕರಣವೊಂದರಲ್ಲಿ ಇಲ್ಲಿನ ಇಂದಿರಾ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸಯನ್ಸಸ್‌ (ಐಜಿಐಎಂಎಸ್‌) ತನ್ನ ಮಹಿಳಾ ಉದ್ಯೋಗಿಗಳಿಗೆ ತಮ್ಮ ಕನ್ಯತ್ವವನ್ನು ಘೋಷಿಸುವಂತೆ ಕೇಳಿಕೊಂಡಿದೆ. ಮಾತ್ರವಲ್ಲದೆ ಪುರುಷ ಉದ್ಯೋಗಿಗಳಿಗೆ ತಮ್ಮ ವೈವಾಹಿಕ ಸಂಬಂಧದಲ್ಲಿರುವ ಪತ್ನಿಯರ ಸಂಖ್ಯೆಯನ್ನು ಘೋಷಿಸುವಂತೆ ತಾಕೀತು ಮಾಡಿದೆ. 

ಐಜಿಐಎಂಎಸ್‌ ತನ್ನ ಉದ್ಯೋಗಿಗಳಿಗೆ ನೀಡಿರುವ ಸ್ಥಿತಿಗತಿ ಘೋಷಣಾ ನಮೂನೆಯಲ್ಲಿ ಉದ್ಯೋಗಿಗಳು ತಾವು ವಿಧುರರೇ, ಅವಿವಾಹಿತರೇ ಅಥವಾ ಕನ್ಯತ್ವವನ್ನು ಉಳಿಸಿಕೊಂಡಿರುವವರೇ ಎಂಬುದನ್ನು ತಿಳಿಸಬೇಕಾಗಿದೆ. 

ಐಜಿಐಎಂಎಸ್‌ ತನ್ನ ಮಹಿಳಾ  ಉದ್ಯೋಗಿಗಳಿಗೆ “ಇತರ ಜೀವಂತ ಪತ್ನಿ ಇಲ್ಲದ ವ್ಯಕ್ತಿಯನ್ನು ನಾನು ಮದುವೆಯಾಗಿದ್ದೇನೆ’ ಎಂದು ಘೋಷಿಸಿಕೊಳ್ಳುವಂತೆಯೂ ಪುರುಷ ಉದ್ಯೋಗಿಗಳು “ವಿವಾಹಿತನಾಗಿದ್ದೇನೆ ಮತ್ತು ಒಂದಕ್ಕಿಂತ ಹೆಚ್ಚು ಪತ್ನಿಯನ್ನು ಹೊಂದಿದ್ದೇನೆ’ ಎಂದು ಘೋಷಿಸಿಕೊಳ್ಳುವಂತೆಯೂ ಕೇಳಿಕೊಂಡಿದೆ. 

ಈ ಘೋಷಣಾ ಪತ್ರದಲ್ಲಿ ಉದ್ಯೋಗಿಗಳು ಸಹಿ ಹಾಕುವಲ್ಲಿ ಹೀಗೊಂದು ಒಕ್ಕಣೆ ಇದೆ : 

“ಕೆಳಗೆ ಹೇಳಲಾಗಿರುವ ಕಾರಣಗಳನ್ನು ಪರಿಗಣಿಸಿ, ಒಂದಕ್ಕಿಂತ ಹೆಚ್ಚು ಜೀವಂತ ಪತ್ನಿಯನ್ನು ಹೊಂದಿರುವ ವ್ಯಕ್ತಿಯನ್ನು ಸೇವೆಗೆ ನೇಮಿಸಿಕೊಳ್ಳುವಲ್ಲಿ ಇರುವ ನಿರ್ಬಂಧದಿಂದ ನನಗೆ ವಿನಾಯಿತಿ ನೀಡಬೇಕು ಎಂದು ನಾನು ಕೋರುತ್ತೇನೆ’. 

ಈ ರೀತಿಯ ವಿಚಿತ್ರ ಘೋಷಣಾ ಪತ್ರವನ್ನು ಉದ್ಯೋಗಿಗಳಿಗೆ ನೀಡುವ ಮೂಲಕ ವಿವಾದ ಸೃಷ್ಟಿಸಿರುವ ಐಜಿಐಎಂಎಸ್‌ ಈಚೆಗೆ ತಪ್ಪು ಕಾರಣಕ್ಕಾಗಿ ಸುದ್ದಿಯಲ್ಲಿತ್ತು.

ಕ್ಯಾನ್ಸರ್‌ ಪೀಡಿತನಾಗಿ ಮೃತ ಪಟ್ಟ ತನ್ನ ಐದು ವರ್ಷ ಪ್ರಾಯದ ಪುತ್ರನನ್ನು ಅಂತ್ಯಕ್ರಿಯೆಗೆ ಒಯ್ಯಲು ಅಂಬುಲೆನ್ಸ್‌ ನೀಡುವಂತೆ ಮಗುವಿನ ತಂದೆ ಮಾಡಿಕೊಂಡಿದ್ದ ಕೋರಿಕೆಯನ್ನು ಐಜಿಐಎಂಎಸ್‌ ತಿರಸ್ಕರಿಸಿದ ಕಾರಣಕ್ಕೆ ಕೊನೆಗೆ ಆ ದುಃಖತಪ್ತ ತಂದೆ ತನ್ನ ಮಗುವಿನ ಶವವನ್ನು ಹೆಗಲ ಮೇಲೆ ಮಸಣಕ್ಕೆ ಒಯ್ದಿದ್ದರು. 

ಟಾಪ್ ನ್ಯೂಸ್

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.