ತಾಜ್ ಮಹಲ್ ನೋಡಲು ಬಂದ ಅರ್ಜೆಂಟೀನಾ ಪ್ರವಾಸಿಗೆ ಕೋವಿಡ್; ವ್ಯಕ್ತಿ ನಾಪತ್ತೆ!
Team Udayavani, Dec 29, 2022, 11:17 AM IST
ಹೊಸದಿಲ್ಲಿ: ಇತ್ತೀಚೆಗೆ ತಾಜ್ ಮಹಲ್ ಗೆ ಭೇಟಿ ನೀಡಿದ ಅರ್ಜೆಂಟೀನಾದ ಪ್ರವಾಸಿಗರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಆದರೆ ಸದ್ಯ ಆತನ ಅಧಿಕಾರಿಗಳ ಕೈಗೆ ಸಿಗದಿರುವುದು ಆತಂಕಕ್ಕೆ ಕಾರಣವಾಗಿದೆ.
ಅರ್ಜೆಂಟೀನಾ ಪ್ರವಾಸಿಯು ಡಿಸೆಂಬರ್ 26 ರಂದು ತಾಜ್ ಮಹಲ್ ಗೆ ಭೇಟಿ ನೀಡಿದ್ದರು. ಈ ವೇಳೆ ರ್ಯಾಂಡಮ್ ಪರೀಕ್ಷೆಗೆ ಒಳಗಾಗಿದ್ದರು.
ಪರೀಕ್ಷೆ ಫಲಿತಾಂಶದ ಬಗ್ಗೆ ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು. ನಂತರ ಅವರು ನಾಪತ್ತೆಯಾಗಿದ್ದಾರೆ ಎಂದು ಉತ್ತರ ಪ್ರದೇಶದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಸಿಯು ಅಧಿಕಾರಿಗಳಿಗೆ ತಪ್ಪಾದ ಫೋನ್ ನಂಬರ್ ಮತ್ತು ತಪ್ಪಾದ ಹೋಟೆಲ್ ವಿಳಾಸವನ್ನು ನೀಡಿದ್ದಾರೆ. ಹೀಗಾಗಿ ಅಧಿಕಾರಿಗಳಿಗೆ ಅವನನ್ನು ಪತ್ತೆಹಚ್ಚಲು ಕಷ್ಟವಾಗಿದೆ. ನಾಪತ್ತೆಯಾದ ವ್ಯಕ್ತಿಯ ವಿವರಗಳನ್ನು ಪಡೆಯಲು ಆರೋಗ್ಯ ಇಲಾಖೆ ಇದೀಗ ಸ್ಥಳೀಯ ಗುಪ್ತಚರ ಘಟಕ, ವಿಮಾನ ನಿಲ್ದಾಣ ಪ್ರಾಧಿಕಾರ, ಎಎಸ್ಐ ಮತ್ತು ಹತ್ತಿರದ ಹೋಟೆಲ್ ಗಳಿಗೆ ಮಾಹಿತಿ ನೀಡಿದೆ.
“ನಾವು ಕೋವಿಡ್-19 ಪಾಸಿಟಿವ್ ಆದ ಅರ್ಜೆಂಟೀನಾದ ಪ್ರವಾಸಿಗನನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ. ಅವರು ಒದಗಿಸಿದ ಸಂಪರ್ಕ ವಿವರಗಳು ತಪ್ಪಾಗಿದೆ. ಇತ್ತೀಚೆಗೆ ಚೆಕ್-ಇನ್ ಮಾಡಿದ ಅರ್ಜೆಂಟೀನಾದ ಪ್ರವಾಸಿಗರ ವಿವರಗಳನ್ನು ಒದಗಿಸಲು ಹೋಟೆಲ್ಗಳಿಗೆ ಕೇಳಲಾಗಿದೆ. ನಾವು ಸಹ ಸಂಪರ್ಕಿಸಿದ್ದೇವೆ. ವ್ಯಕ್ತಿಯ ವಿವರಗಳನ್ನು ಪಡೆಯಲು ಎಎಸ್ಐ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರವನ್ನು ಸಂಪರ್ಕಿಸಿದ್ದೇವೆ. ಒಮ್ಮೆ ಪತ್ತೆಯಾದ ನಂತರ ರೋಗವು ಮತ್ತಷ್ಟು ಹರಡುವುದನ್ನು ತಡೆಯಲು ಅವನನ್ನು ಪ್ರತ್ಯೇಕಿಸಲಾಗುತ್ತದೆ” ಎಂದು ಆಗ್ರಾ ಮುಖ್ಯ ಆರೋಗ್ಯಾಧಿಕಾರಿ ಅರುಣ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
MUST WATCH
ಹೊಸ ಸೇರ್ಪಡೆ
ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ