ರಾತ್ರಿ ಗಡಿ ನುಸುಳಲು ಯತ್ನಿಸಿದ್ದ PAK ನುಸುಳುಕೋರರನ್ನು ಹತ್ಯೆಗೈದ ಭಾರತೀಯ ಸೇನೆ; ವಿಡಿಯೋ
Team Udayavani, Sep 18, 2019, 11:03 AM IST
ನವದೆಹಲಿ: ಗಡಿ ನಿಯಂತ್ರಣ ರೇಖೆ ಸಮೀಪ ಇರುವ ಉರಿ, ಕೇರಾನ್, ಫೂಂಚ್, ಮೆಂಧಾರ್ ಮತ್ತು ನೌಶೇರಾ ಸೆಕ್ಟರ್ ಸೇರಿದಂತೆ ವಿವಿಧ ಪ್ರದೇಶಗಳ ಸಮೀಪ ಪಾಕಿಸ್ತಾನದ ಬಿಎಟಿ(ಬಾರ್ಡರ್ ಆ್ಯಕ್ಷನ್ ಟೀಮ್) ಸೈನಿಕರು ಹಾಗೂ ಉಗ್ರರನ್ನು ನಿಯೋಜಿಸಿದ್ದು, ಇತ್ತೀಚೆಗೆ ಭಾರತದ ಗಡಿಯೊಳಗೆ ನುಗ್ಗುವ ಪಾಕ್ ನ ಬಿಎಟಿಯ ಪ್ರಯತ್ನವನ್ನು ಭಾರತೀಯ ಸೇನಾಪಡೆ ವಿಫಲಗೊಳಿಸಿರುವುದು ಬೆಳಕಿಗೆ ಬಂದಿದೆ.
ಭಾರತೀಯ ಸೇನಾಪಡೆ ಬಿಡುಗಡೆಗೊಳಿಸಿರುವ ಸಿಸಿಟವಿ ವೀಡಿಯೋದಲ್ಲಿ, ಸೆಪ್ಟೆಂಬರ್ 12-13ರಂದು ರಾತ್ರಿ ಪಾಕಿಸ್ತಾನದ ಗಡಿಕಾವಲು ಪಡೆ(ಬಿಎಟಿ) ತಂಡ ಹಾಜಿಪುರ್ ನಲ್ಲಿ ಒಳನುಸುಳಲು ಯತ್ನಿಸಿರುವ ಥರ್ಮಲ್ ಇಮೇಜ್ ಸೆರೆಯಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಪಡೆ ಗ್ರೆನೇಡ್ ದಾಳಿ ನಡೆಸಿ ಪಾಕ್ ನ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿರುವುದು ಸೆರೆಯಾಗಿದೆ.
ಗಡಿನಿಯಂತ್ರಣ ರೇಖೆ ಸಮೀಪದಲ್ಲಿ ಒಳನುಸುಳಲು ಪ್ರಯತ್ನಿಸಿದ್ದ ಪಾಕಿಸ್ತಾನದ ಎಸ್ ಎಸ್ ಜಿ, ಬಿಎಟಿ ಸೈನಿಕರನ್ನು ಭಾರತೀಯ ಪಡೆ ಗ್ರೆನೇಡ್ ದಾಳಿ ಮೂಲಕ ನುಸುಳುಕೋರರನ್ನು ಹತ್ಯೆಗೈದಿರುವುದಾಗಿ ವರದಿ ತಿಳಿಸಿದೆ.
#WATCH Army sources: Infiltration or attempted BAT(Border Action Team) action by Pakistan on 12-13 Sept 2019, was seen&eliminated. In video, Indian troops can be seen launching grenades at Pak’s SSG(Special Service Group) commandos/terrorists using Under Barrel Grenade Launchers. pic.twitter.com/KOnYJPWyV8
— ANI (@ANI) September 18, 2019
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಭಾರತ ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ನಂತರ ಪಾಕಿಸ್ತಾನದ ಮಿಲಿಟರಿ ಮತ್ತು ಉಗ್ರರು ಗಡಿನಿಯಂತ್ರಣ ರೇಖೆಯಲ್ಲಿ ಸಕ್ರಿಯವಾಗಿದ್ದು, ಒಳನುಸುಳಿ ದಾಳಿ ನಡೆಸಲು ಸಂಚು ರೂಪಿಸಿದ್ದವು. ಆದರೆ ಪಾಕಿಸ್ತಾನದ ಎಲ್ಲಾ ದಾಳಿ ಯತ್ನ, ಒಳನುಸುಳುವಿಕೆಯನ್ನು ಭಾರತೀಯ ಸೇನಾಪಡೆ ವಿಫಲಗೊಳಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ