ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ನಾಲ್ವರು ಉಗ್ರರ ಎನ್ ಕೌಂಟರ್
Team Udayavani, Mar 15, 2020, 1:05 PM IST
ಜಮ್ಮು-ಕಾಶ್ಮೀರ: ಇಂದು ಬೆಳಗ್ಗೆ ಅನಂತ್ ನಾಗ್ ಜಿಲ್ಲೆಯ ವಾತ್ರಿಗಾಮ ಗ್ರಾಮದಲ್ಲಿ ಭದ್ರತಾ ಪಡೆಗಳು ನಾಲ್ಕು ಉಗ್ರರನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಹತ್ಯೆಯಾದ ಉಗ್ರರಲ್ಲಿ ಒಬ್ಬನನ್ನು ತಾರಿಖ್ ಅಹಮ್ಮದ್ ಎಂದು ಗುರುತಿಸಲಾಗಿದ್ದು ಅನಂತ್ ನಾಗ್ ಜಿಲ್ಲೆಯ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ. ಉಳಿದ ಮೂವರು ಲಷ್ಕರ್ ಏ ತೊಯ್ಬಾ ಉಗ್ರ ಸಂಘಟನೆಯ ಸದಸ್ಯರಾಗಿದ್ದರು ಎಂದು ವರದಿಯಾಗಿದೆ.
ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗೆ ಕಾರ್ಯಚರಣೆಗಿಳಿದ ಭದ್ರತಾ ಪಡೆಗಳು ವಾತ್ರಿಗಾಮ ಗ್ರಾಮದಲ್ಲಿ ಪ್ರತಿಯೊಂದು ಮನೆಯನ್ನು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ.
ಇದಕ್ಕೂ ಮೊದಲು ಗುಪ್ತಚರ ಇಲಾಖೆ 3ಕ್ಕಿಂತ ಹೆಚ್ಚು ಉಗ್ರರು ಗ್ರಾಮದೊಳಕ್ಕೆ ನುಸುಳಿದ್ದಾರೆ ಎಂಬ ಮಾಹಿತಿ ನೀಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ