ಮಹಿಳೆಗೆ ಚಪ್ಪಲಿ ಹಾರ ತೊಡಿಸಿ ಮೆರವಣಿಗೆ: ಸೇನಾ ಜವಾನ ಸೆರೆ
Team Udayavani, Dec 23, 2017, 7:06 PM IST
ಮುಂಬಯಿ : ಮಹಿಳೆಯ ಕುತ್ತಿಗೆಗೆ ಚಪ್ಪಲಿ ಹಾರ ತೊಡಿಸಿ ಆಕೆಯನ್ನು ಮೆರವಣಿಗೆ ಮಾಡಿಸಿದ ಸೇನಾ ಜವಾನನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ಉಮರ್ಗಾ ತೆಹಶೀಲ್ ವ್ಯಾಪ್ತಿಗೆ ಒಳಪಡುವ ಆಲೂರು ಗ್ರಾಮದಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತನ್ನ ಪತ್ನಿಯ ವಿರುದ್ಧ 55ರ ಹರೆಯದ ಸಂತ್ರಸ್ತ ಮಹಿಳೆಯು ಮಾನಹಾನಿಕರವಾದ ಸುಳ್ಳು ವದಂತಿಗಳನ್ನು ಸೃಷ್ಟಿಸುತ್ತಿದ್ದಳು ಎಂಬ ಕಾರಣಕ್ಕೆ ಕುಪಿತಗೊಂಡ ಸೇನಾ ಜವಾನ ಶಿವಾನಂದ ಸ್ವಾಮಿ ಎಂಬಾತನು ಈ ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುರುಂ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಎಂ ಐ ಶೇಖ್ ಅವರು ಸ್ವಾಮಿ ವಿರುದ್ಧ ಕೇಸು ದಾಖಲಿಸಿಕೊಂಡ ಬಳಿಕ ಆತನನ್ನು ತಾವು ಬಂಧಿಸಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!