ಸೇನಾ ಮೇಜರ್, ಯೋಧ ಹುತಾತ್ಮ
Team Udayavani, Jan 12, 2019, 9:52 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ(ಐಇಡಿ)ವೊಂದು ಸ್ಫೋಟ ಗೊಂಡ ಪರಿಣಾಮ ಶುಕ್ರವಾರ ಸೇನೆಯ ಮೇಜರ್ ಹಾಗೂ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ನೌಶೆರಾ ವಲಯದ ಲಾಮ್ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಗಸ್ತು ತಿರುಗುವ ಹಾದಿಯಲ್ಲೇ ಐಇಡಿಯನ್ನು ಹುದುಗಿಸಿಡಲಾಗಿತ್ತು.
ಯೋಧರು ಆ ಸ್ಥಳ ಪ್ರವೇಶಿಸುತ್ತಿದ್ದಂತೆ ಅದು ಸ್ಫೋಟಗೊಂಡಿದ್ದು, ಮೇಜರ್ ಹಾಗೂ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದರು ಎಂದು ಪೊಲೀಸರು ತಿಳಿಸಿದ್ದಾರೆ. ಇದು ಉಗ್ರರ ಕೃತ್ಯ ಎಂದು ಶಂಕಿಸಲಾಗಿದೆ.
ಬಂಕರ್ ಮೇಲೆ ದಾಳಿ: ಜಮ್ಮು-ಕಾಶ್ಮೀರದ ಲಾಲ್ ಚೌಕ್ನಲ್ಲಿರುವ ಸಿಆರ್ಪಿಎಫ್ ಬಂಕರ್ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣವೂ ಶುಕ್ರವಾರ ನಡೆದಿದೆ. ಬಂಕರ್ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದು, ಸಾವು ಸಂಭವಿಸಿಲ್ಲ.
ಪಾಕ್ ಗುಂಡಿನ ದಾಳಿ: ಈ ನಡುವೆ, ರಜೌರಿ ಮತ್ತು ಪೂಂಛ… ಜಿಲ್ಲೆಯಲ್ಲಿ ಪಾಕಿಸ್ತಾನ ಪಡೆ ಸತತ 4ನೇ ದಿನವೂ ಕದನ ವಿರಾಮ ಉಲ್ಲಂ ಸಿದೆ. ಪಾಕ್ ಸೈನಿಕರು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಸೇನೆಯ ಪೋರ್ಟರ್ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!