ಮೇಜರ್ ವಿರುದ್ಧ ಶಿಸ್ತುಕ್ರಮ
Team Udayavani, Aug 28, 2018, 6:00 AM IST
ನವದೆಹಲಿ/ಶ್ರೀನಗರ: ಶ್ರೀನಗರದ ಹೋಟೆಲ್ ಒಂದರಲ್ಲಿ ಸ್ಥಳೀಯ ಯುವತಿಯೊಂದಿಗೆ ಕಾಣಿಸಿಕೊಂಡಿದ್ದ ಮೇಜರ್ ಲೀತುಲ್ ಗೊಗೋಯ್ ವಿರುದ್ಧ ಶಿಸ್ತು ಕ್ರಮಕ್ಕೆ ಸೇನೆ ಆದೇಶಿಸಿದೆ. ಕಾರ್ಯಾಚರಣಾ ಪ್ರದೇಶ ಗಳಲ್ಲಿ ಸ್ಥಳೀಯರೊಂದಿಗೆ ಸಂಪರ್ಕ ಸಾಧಿಸಬಾರದು ಎಂಬ ಸೇನಾ ನಿಯಮ ಉಲ್ಲಂ ಸಿದ ಕಾರಣಕ್ಕಾಗಿ ಮೇಜರ್ ಗೊಗೋಯ್ ಅವರನ್ನು ದೋಷಿ ಎಂದು ಸೇನಾ ಕೋರ್ಟ್ ಹೇಳಿದೆ.
ಮೇ 23ರಂದು 18 ವರ್ಷದ ಯುವತಿಯೊಂದಿಗೆ ಗೊಗೋಯ್ ಹೊಟೇಲ್ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರೆನ್ನಲಾದ ವೇಳೆ ಪೊಲೀಸರು ಬಂಧಿಸಿದ್ದರು. ಗೊಗೋಯ್ ತಪ್ಪು ಮಾಡಿರುವುದು ಸಾಬೀತಾದರೆ ಅವರಿಗೆ ತಕ್ಕ ಶಿಕ್ಷೆ ನೀಡಲಾಗುತ್ತದೆ ಎಂದು ಇತ್ತೀಚೆಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಶ್ರೀನಗರ ಭೇಟಿ ವೇಳೆ ಹೇಳಿದ್ದರು. ಈ ಹಿಂದೆ ಏಪ್ರಿಲ್ 9ರಂದು ಶ್ರೀನಗರ ಲೋಕಸಭಾ ಉಪ ಚುನಾವಣೆ ವೇಳೆ ಕಲ್ಲುತೂರಾಟಗಾರರಿಂದ ರಕ್ಷಣೆಗಾಗಿ ಯುವಕನೊಬ್ಬನನ್ನು ಜೀಪಿಗೆ ಕಟ್ಟಿದ ಕಾರಣಕ್ಕೆ ಗೊಗೋಯ್ ಸುದ್ದಿಗೆ ಗ್ರಾಸವಾಗಿದ್ದರು. ಗೊಗೋಯ್ ಅವರ ಈ ಕ್ರಮ ಸೇನೆಯಿಂದ ಶ್ಲಾಘನೆಗೆ ಒಳಗಾಗಿತ್ತು, ಅವರು ಗೌರವಕ್ಕೂ ಪಾತ್ರರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ