ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ: ಭಾರತೀಯ ಯೋಧ ಹುತಾತ್ಮ
Team Udayavani, Jun 5, 2020, 8:05 AM IST
ಶ್ರೀನಗರ: ಕದನ ವಿರಾಮ ಉಲ್ಲಂಘಿಸಿ ಪಾಕಿಸ್ಥಾನ ಸೇನೆ ಗುಂಡಿನ ದಾಳಿ ನಡೆಸಿದರ ಪರಿಣಾಮವಾಗಿ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜ್ಔರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.
ಗುರುವಾರ(05-06-2020) ರಾತ್ರಿ 7 ಗಂಟೆ ಸುಮಾರಿಗೆ ಪಾಕಿಸ್ತಾನದ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನೆ ಅಧಿಕಾರಿಗಳ ಪ್ರಕಾರ, ಪಾಕಿಸ್ತಾನ ಸೇನೆಯು ಸುಂದರ್ ಬಾನಿ ಸೆಕ್ಟರ್ನ ಪ್ರದೇಶಗಳನ್ನು ಗುರಿಯಾಗಿಸಿತ್ತು.
ಪೂಂಚ್ ಜಿಲ್ಲೆಯಲ್ಲೂ ಕೂಡ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಮತ್ತೊಂದು ಬೆಳವಣಿಗೆಯಲ್ಲಿ ರಾಜೌರಿ ಕಾಲಕೋಟೆ ಪ್ರದೇಶದದಲ್ಲಿ ಓರ್ವ ಉಗ್ರನನ್ನ ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು 2ರಿಂದ 3 ಉಗ್ರರು ಅಡಗಿರುವ ಸಾಧ್ಯತೆಯಿದ್ದು ರಜೌರಿ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ.