ಸೇವೆಯಲ್ಲಿಲ್ಲದಾಗ “ದಿವ್ಯಾಂಗ’ರಾದರೆ ಪಿಂಚಣಿಯಿಲ್ಲ! ಸುಪ್ರೀಂ ಕೋರ್ಟ್ ತೀರ್ಪು
ಯೋಧರೊಬ್ಬರ ಪ್ರಕರಣ
Team Udayavani, Jul 20, 2022, 6:55 AM IST
ನವದೆಹಲಿ: ಯೋಧನೊಬ್ಬ ದೇಶ ಸೇವೆಯಲ್ಲಿ ನಿರತನಾಗಿದ್ದಾಗ ಅಂಗವೈಕಲ್ಯಕ್ಕೆ ತುತ್ತಾದರೆ ಮಾತ್ರ ಆತ ಯೋಧರಿಗೆ ನೀಡಲಾಗುವ “ದಿವ್ಯಾಂಗ ಪಿಂಚಣಿ’ ಸೌಲಭ್ಯಕ್ಕೆ ಅರ್ಹನಾಗುತ್ತಾನೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ಸುಮಾರು 23 ವರ್ಷಗಳ ಹಿಂದಿನ ಪ್ರಕರಣವೊಂದರ ವಿಚಾರಣೆ ನಡೆಸಿರುವ ನ್ಯಾಯಪೀಠ, ಸೇವೆಯಲ್ಲಿಲ್ಲದ ವೇಳೆ ಯೋಧನೊಬ್ಬ ಅಪಘಾತ ಅಥವಾ ಮತ್ತಿತರ ಕಾರಣದಿಂದ ಅಂಗವೈಕಲ್ಯಕ್ಕೀಡಾದರೆ, ಅಂಥವರಿಗೆ ಈ ಸೌಲಭ್ಯ ನೀಡಲು ಸಾಧ್ಯವಿಲ್ಲ. ಆದರೆ, ಸೇವೆಯಲ್ಲಿದ್ದಾಗಲೇ ಗಾಯಗೊಂಡು ವಿಕಲತೆಗೆ ಒಳಗಾಗಿದ್ದು ಆ ವಿಕಲತೆ ಶೇ. 20ಕ್ಕಿಂತ ಹೆಚ್ಚಿದ್ದರೆ, ಅಥವಾ ಈ ಹಿಂದೆ ಸೇನಾ ಸೇವೆಯಲ್ಲಿದ್ದಾಗ ಆಗಿದ್ದ ಲಘು ಅಂಗವೈಕಲ್ಯವು ಸೇವೆಯಲ್ಲಿದ್ದಾಗ ಉಲ್ಬಣಗೊಂಡರೆ ಅಂಥವರಿಗೆ ದಿವ್ಯಾಂಗ ಪಿಂಚಣಿ ಸೌಲಭ್ಯ ನೀಡಬಹುದು ಎಂದು ಸ್ಪಷ್ಟವಾಗಿ ಹೇಳಿದೆ.
1999ರಲ್ಲಿ ಯೋಧರೊಬ್ಬರು ರಜೆಯ ಮೇಲೆ ಊರಿಗೆ ತೆರಳಿದ್ದಾಗ ರಸ್ತೆ ಅಪಘಾತದಲ್ಲಿ ಅಂಗವಿಕಲರಾಗಿದ್ದರು. ಅವರಿಗೆ ಸೇನಾ ನ್ಯಾಯಾಲಯ ಅವರಿಗೆ ಪಿಂಚಣಿಯ ಸೌಲಭ್ಯ ಕಲ್ಪಿಸಿತ್ತು. ಆದರೆ, ಇದನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ