ಭಾರತೀಯ ಸೇನೆಯ ಕ್ಷಿಪ್ರ ಕಾರ್ಯಾಚರಣೆ; ಕಣಿವೆಯಲ್ಲಿ 60 ಜೈಷ್ ಉಗ್ರರು!
Team Udayavani, Feb 18, 2019, 10:20 AM IST
ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಜೈಷ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ 60 ಮಂದಿ ಉಗ್ರರು ಕಾರ್ಯಾಚರಿಸುತ್ತಿದ್ದು, ಅದರಲ್ಲಿ 35 ಉಗ್ರರಿಗೆ ಉನ್ನತ ತರಬೇತಿ ನೀಡಲಾಗಿದೆ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಅಷ್ಟೇ ಅಲ್ಲ ಪುಲ್ವಾಮ ಘಟನೆಯ ಬಳಿಕ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಬಿಗಿ ಭದ್ರತೆ ಏರ್ಪಡಿಸಿದ್ದು, ಹೈ ಅಲರ್ಟ್ ಆಗಿರುವುದಾಗಿ ವಿವರಿಸಿದೆ. ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಭಾರತೀಯ ಸೇನೆಯ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವರದಿ ತಿಳಿಸಿದೆ.
ಕಾಶ್ಮೀರ ಕಣಿವೆ ಪ್ರದೇಶದಲ್ಲಿನ ಬೆಳವಣಿಗೆಯ ಬಗ್ಗೆಯೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಹೇಳಿದೆ. ಕಾಶ್ಮೀರ ಕಣಿವೆಯಲ್ಲಿ ಅಡಗಿರುವ ಜೈಷ್ ಉಗ್ರರನ್ನು ಸಂಪೂರ್ಣವಾಗಿ ಸದೆ ಬಡಿಯುವ ನಿಟ್ಟಿನಲ್ಲಿ ಭಾರತೀಯ ಸೇನೆ ನಿರತವಾಗಿದೆ. ಅಲ್ಲದೇ ಆ ಪ್ರದೇಶದಲ್ಲಿರುವ ನಾಗರಿಕರ ರಕ್ಷಣೆಗೆ ಬೇಕಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸೇನೆಯ ಮೂಲಗಳು ಖಚಿತಪಡಿಸಿರುವುದಾಗಿ ವರದಿ ವಿವರಿಸಿದೆ.
ಪುಲ್ವಾಮ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಸೋಮವಾರ ಕಾಶ್ಮೀರ ಕಣಿವೆಯಲ್ಲಿ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೇಜರ್ ಸೇರಿದಂತೆ ನಾಲ್ವರು ಉಗ್ರರು ಹುತಾತ್ಮರಾಗಿದ್ದಾರೆ. ಏತನ್ಮಧ್ಯೆ ಪುಲ್ವಾಮ ದಾಳಿಗೆ ಪ್ರತೀಕಾರ ಎಂಬಂತೆ ಭಾರತೀಯ ಸೇನೆಯ ಕಾರ್ಯಾಚರಣೆಗೆ ದಾಳಿಯ ಮಾಸ್ಟರ್ ಮೈಂಡ್ ಘಾಜಿ ರಶೀದ್ ನನ್ನು ಹೊಡೆದುರುಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!